ರಾಹುಕಾಲ ಬಂದು ಬಿಡುತ್ತೆ ಅಂತ, ತಮ್ಮ ಬರುವ ಮುನ್ನವೇ ದೀಪ ಬೆಳಗಿಸಿದ ಶಾಸಕ ಹೆಚ್.ಡಿ. ರೇವಣ್ಣ

ರಾಹುಕಾಲ ಬಂದು ಬಿಡುತ್ತೆ ಅಂತ, ತಮ್ಮ ಬರುವ ಮುನ್ನವೇ ದೀಪ ಬೆಳಗಿಸಿದ ಶಾಸಕ ಹೆಚ್.ಡಿ. ರೇವಣ್ಣ

Published : Mar 13, 2024, 03:18 PM ISTUpdated : Mar 13, 2024, 03:28 PM IST

ಜೆಡಿಎಸ್ ಸಭೆಗೆ ಮಾಜಿ ಸಿಎಂ ಕುಮಾರಸ್ವಾಮಿ ಬರುವುದರೊಳಗೆ ರಾಹುಕಾಲ ಬಂದುಬಿಡುತ್ತದೆ ಅಂತಾ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ತರಾತುರಿಯಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಹಾಸನ (ಮಾ.13): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವ ಸಿದ್ದತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಕಾರ್ಯಕ್ರಮ ಉದ್ಘಾಟನೆಗಾಗಿ ಮುಖ್ಯ ಅತಿಥಿ ಕುಮಾರಸ್ವಾಮಿ ಅವರಿಗೆ ಕಾಯಲಾಗುತ್ತಿತ್ತು. ಆದರೆ, ಇನ್ನೂ ತಡ ಮಾಡಿದರೆ ರಾಹುಕಾಲ ಬಂದುಬಿಡುತ್ತದೆ ಅಂತಾ ಕುಮಾರಸ್ವಾಮಿಗಾಗಿ ಕಾಯದೇ ಶಾಸಕ ಹೆಚ್.ಡಿ.ರೇವಣ್ಣ ಅವರು ವೇದಿಕೆ ಮೇಲಿದ್ದ ಸ್ಥಳೀಯ ನಾಯಕರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಘಟನೆ ಹಾಸನ ನಗರದ ಜ್ಞಾನಕ್ಷಿ ಕಲ್ಯಾಣ ಮಂಟಪದಲ್ಲಿ ಇಂದು ನಡೆಯಿತು.  ಜೆಡಿಎಸ್ ಶಾಸಕರು, ಮಾಜಿ ಜಿ.ಪಂ., ತಾ.ಪಂ.,ಸದಸ್ಯರು, ಹಾಲಿ, ಮಾಜಿ ನಗರಸಭೆ, ಪುರಸಭೆ, ಗ್ರಾ.ಪಂ. ಸದಸ್ಯರೊಂದಿಗೆ ಸಭೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ. ಇದು ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವ ಸಿದ್ದತೆ ಸಭೆಯಾಗಿದೆ. ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್‌ರೇವಣ್, ಎಚ್.ಡಿ.ರೇವಣ್ಣ, ಶಾಸಕ ಸ್ವರೂಪ್‌ಪ್ರಕಾಶ್, ಮಾಜಿ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್ ಜೆಡಿಎಸ್ ನಾಯಕರು ಉಪಸ್ಥಿತಿ ಇರಲಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more