Hassan: ಮತಯಾಚನೆಗೆ ಹೋದರೆ ಹೊಡೆಯಲು ಬಂದ ಗ್ರಾಮಸ್ಥರು: ಸ್ಥಳದಿಂದ ಕಾಲ್ಕಿತ್ತು ಬಚಾವ್ ಆದ ಎನ್.ಆರ್. ಸಂತೋಷ್‌

Hassan: ಮತಯಾಚನೆಗೆ ಹೋದರೆ ಹೊಡೆಯಲು ಬಂದ ಗ್ರಾಮಸ್ಥರು: ಸ್ಥಳದಿಂದ ಕಾಲ್ಕಿತ್ತು ಬಚಾವ್ ಆದ ಎನ್.ಆರ್. ಸಂತೋಷ್‌

Published : Feb 25, 2023, 06:56 PM IST

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಯಾಚನೆಗೆ ಹೋಗಿದ್ದ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎನ್.ಆರ್.ಸಂತೋಷ್‌ ಅವರ ಮೇಲೆ ಅರಸೀಕೆರೆ ತಾಲ್ಲೂಕಿನಲ್ಲಿ, ಬೆಳಗುಂಬ ಗ್ರಾಮಸ್ಥರು ಹಲ್ಲೆ ಮಾಡಲು ಮುಂದಾಗಿದ್ದಾರೆ.

ಹಾಸನ (ಫೆ.25): ಅರಸೀಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎನ್.ಆರ್.ಸಂತೋಷ್‌ ಅವರು ಮತಯಾಚನೆಗೆ ಹೋದ ವೇಳೆ ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನಲ್ಲಿ, ಬೆಳಗುಂಬ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದು, ಹಲ್ಲೆ ಮಾಡಲು ಮುಂದಾಗಿದ್ದಾರೆ. 

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಯಾಚನೆಗೆ ಆಗಮಿಸಿದ್ದ ವೇಳೆ ಸ್ಥಳೀಯ ಸಹಕಾರ ಸಂಘ (ಸೊಸೈಟಿ) ವಿಚಾರವಾಗಿ ಮಾತನ್ನು ಆರಂಭಿಸಿದ್ದಾರೆ. ಈ ವೇಳೆ ನಾನು ಹಲವು ವರ್ಷಗಳಿಂದ ಕೇಳಿದರೂ ಯಾವೊದೊಂದು ನೆರವು ನೀಡಲು ಮುಂದಾಗಲಿಲ್ಲ. ನಾವೇ ಕಷ್ಟಪಟ್ಟು ಸೊಸೈಟಿಗೆ 1 ಕೋಟಿ ರೂ.ಗಳನ್ನು ಹಾಕಿಸಿಕೊಂಡಿದ್ದೇವೆ. ಈಗ ಹಣ ಬಂದ ತಕ್ಷಣವೇ ನೀನು ಮಾತನಾಡಲು ಬಂದಿದ್ದೀಯಾ. ನಮಗೆ ಒಂದಾದರೂ ಒಳ್ಳೆಯ ಕೆಲಸವನ್ನು ಮಾಡಿಕೊಟ್ಟಿದ್ದೀಯಾ ಎಂದು ಏಕವಚನದಲ್ಲಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. 

Hassan Ticket Fight: ಹಾಸನದಿಂದ ತಾನೇ ಸ್ಪರ್ಧಿಸುವ ಸವಾಲು ಹಾಕಿದ ಎಚ್ ಡಿ ರೇವಣ್ಣ: ಮತ್ತಷ್ಟು ಕಗ್ಗಂಟಾದ ಟಿಕೆಟ್‌ ಫೈಟ್

ಸುಮ್ಮನೆ ಓಟು ಕೇಳಿಕೊಂಡು ಹೋಗು: ನಮ್ಮೂರ ಸೊಸೈಟಿ ಬಗ್ಗೆ ಮಾತನಾಡಲು ನೀನ್ಯಾರು. ನಾವೆಲ್ಲ ಕಷ್ಟಪಟ್ಟು ಸೊಸೈಟಿಗೆ ಒಂದು ಕೋಟಿ ದುಡ್ಡು ಹಾಕ್ಸಿದ್ದೀವಿ. ಈಗ ನೀನು ಸುಮ್ಮನೆ ಓಟು ಕೇಳ್ಕಂಡು ಹೋಗು. ಅದನ್ನು ಬಿಟ್ಟು ನೀನು ಬಂದು ಊರಿಗೆ ಊರನ್ನೆ ಹೊಡೆದಾಡುಸುತ್ತಿದ್ದೀಯಾ. ನೀನು ಏನು ಒಳ್ಳೆಯ ಕೆಲಸ ಮಾಡಿದ್ದೀಯಾ. ನಿನಗೆ ನಮ್ಮ ಸೊಸೈಟಿ ಬಗ್ಗೆ ಆಸಕ್ತಿ ಇದ್ದರೆ ನಿನ್ನ ಸ್ವಂತ ಜಾಗ ಕೊಡು. ನಾವ್ಯಾಕೆ ನಿನ್ನ ಜೊತೆ ಬರಬೇಕು, ನಿನ್ನಂತಹವರನ್ನು ಬಹಳ ಜನ ನೋಡಿದ್ದೀವಿ. ಎಲ್ಲಿಂದಲೂ ಬಂದು ನಮ್ಮ‌ ಮೇಲೆ‌ ದೌರ್ಜನ್ಯ ಮಾಡಲು ಬರ್ತಿಯಾ ಎಂದು ವಗ್ದಾಳಿ ನಡೆಸಿದರು.

ಗ್ರಾಮಸ್ಥರಿಂದ ಹಲ್ಲೆಗೆ ಯತ್ನ: ಇನ್ನು ಅರಸೀಕೆರೆ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎನ್.ಆರ್.ಸಂತೋಷ್‌‌ ವಿರುದ್ದ ಗ್ರಾಮಸ್ಥರ ಆಕ್ರೋಶದ ಬೆನ್ನಲ್ಲೇ ಪರ ವಿರೋಧ ಆರಂಭವಾಗಿದೆ. ಈ ವೇಳೆ ಮತ್ತಷ್ಟು ಆಕ್ರೋಶಗೊಂಡ ಕೆಲವರು ಎನ್.ಆರ್.ಸಂತೋಷ್ ಮೇಲೆ‌ ಹಲ್ಲೆಗೆ ಮುಂದಾಗಿದ್ದಾರೆ. ಗ್ರಾಮಸ್ಥರ ಆಕ್ರೋಶಕ್ಕೆ ಹೆದರಿ ಸ್ಥಳದಿಂದ ಎನ್.ಆರ್.ಸಂತೋಷ್ ಕಾಲ್ಕಿತ್ತಿದ್ದಾರೆ. ಮಾತಿನ ಚಕಮಕಿಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?