ರಕ್ತ ಬಸಿದು ಪಕ್ಷ ಕಟ್ಟಿದ್ದರು ದಣಿವರಿಯದ ದೇವೇಗೌಡರು! ಅಜ್ಜ ಕಟ್ಟಿದ ಪಕ್ಷಕ್ಕೆ ಕಂಟಕ ತಂದಿಟ್ಟನಾ ಮೊಮ್ಮಗ..?

ರಕ್ತ ಬಸಿದು ಪಕ್ಷ ಕಟ್ಟಿದ್ದರು ದಣಿವರಿಯದ ದೇವೇಗೌಡರು! ಅಜ್ಜ ಕಟ್ಟಿದ ಪಕ್ಷಕ್ಕೆ ಕಂಟಕ ತಂದಿಟ್ಟನಾ ಮೊಮ್ಮಗ..?

Published : May 05, 2024, 04:52 PM IST

ಅಜ್ಜ ನೆಟ್ಟು ಬೆಳೆಸಿದ ಆಲದ ಮರಕ್ಕೆ ಮೊಮ್ಮಗನಿಂದಲೇ ಕೊಡಲಿ ಪೆಟ್ಟು..!
ಪ್ರಜ್ವಲ್ ಪ್ರಕರಣ ಜೆಡಿಎಸ್‌ಗೆ  ಕಳಂಕವೂ ಹೌದು, ಕಂಟಕವೂ ಹೌದು..!
ಪೆನ್‌ಡ್ರೈವ್ ಬಾಂಬ್ ಬೆಂಕಿ.. ಜೆಡಿಎಸ್ ಕೋಟೆಯಲ್ಲಿ ಜ್ವಾಲಾಮುಖಿ..!
ಜೆಡಿಎಸ್ ತೊರೆಯಲು ತೆರೆಮರೆಯಲ್ಲಿ ಸಿದ್ಧವಾಗ್ತಿದ್ಯಾ ಶಾಸಕರ ದಂಡು..?

ಆಡಿಸಿ ನೋಡು, ಬೀಳಿಸಿ ನೋಡು..ಇದು ದೇವೇಗೌಡರ(HD Devegowda) ರಾಜಕೀಯ ಚದುರಂಗದಾಟದ ಕಥೆ. ಆ ಚದುರಂಗದಲ್ಲಿ ಜೆಡಿಎಸ್(JDS) ಎದ್ದು-ಬಿದ್ದು ಪುಟಿದೆದ್ದು ನಿಂತ ರೋಚಕ ಕಥೆ. ಜೆಡಿಎಸ್ ಪಕ್ಷಕ್ಕಾಗಿ ದೇವೇಗೌಡರ ಹೋರಾಟ ಎಂಥದ್ದು ಅನ್ನೋದಕ್ಕೆ ಇದೊಂದು ಸಾಕ್ಷಿ ಸಾಕು. ಜೆಡಿಎಸ್.. ಅಂದ್ರೆ ಜಾತ್ಯಾತೀತ ಜನತಾದಳ ಹರದನಹಳ್ಳಿ ದೊಡ್ಡಗೌಡ ದೇವೇಗೌಡರ ಛಲದ ಪ್ರತೀಕ. ದೇವೇಗೌಡ್ರು ಅಂದ್ರೆ ಹೋರಾಟ, ಹೋರಾಟ ಅಂದ್ರೆ ದೇವೇಗೌಡ್ರು. ಹಾಸನ(Hassan) ಜಿಲ್ಲೆಯ ಹೊಳೆನರಸೀಪುರದ ಒಬ್ಬ ಸಾಮಾನ್ಯ ರೈತನ ಮಗ ದೇಶದ ಪ್ರಧಾನಿಯಾಗ್ತಾರೆ, ರಾಜ್ಯದ ಮುಖ್ಯಮಂತ್ರಿಯಾಗ್ತಾರೆ ಅಂದ್ರೆ ಅದು ದೇವೇಗೌಡರ ಶಕ್ತಿ ಮತ್ತು ತಾಕತ್ತು. ರಾಜಕೀಯದಲ್ಲಿ ಗೌಡ್ರನ್ನು ಭೀಷ್ಮಾಚಾರ್ಯ, ಚದುರಂಗದ ಚಾಣಕ್ಯ ಅಂತ ಕರೀತಾರೆ. ಛಲ ಅನ್ನೋ ಪದಕ್ಕೆ ಸಮಾನಾಂತರ ಅರ್ಥ ಅಂತ ಏನಾದ್ರೂ ಇದ್ರೆ ಅದು ಎಚ್.ಡಿ ದೇವೇಗೌಡ. ಇಂಥಾ ದೇವೇಗೌಡರು ಕಟ್ಟಿದ ಪಕ್ಷ ಜೆಡಿಎಸ್. ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣನದ್ದು(Prajwal Revanna) ಎನ್ನಲಾಗ್ತಿರೋ ಅಶ್ಲೀಲ ವೀಡಿಯೊ ಪ್ರಕರಣ ಪೆಟ್ಟು ಕೊಟ್ಟಿರೋದು ದೇವೇಗೌಡರ ಕುಟುಂಬಕ್ಕಷ್ಟೇ ಅಲ್ಲ, ಜೆಡಿಎಸ್ ಪಕ್ಷಕ್ಕೂ ದೊಡ್ಡ ಕಂಟಕ ಎದುರಾಗಿದೆ. ಈ ಪ್ರಕರಣ ಬೆಳಕಿಗೆ ಬರ್ತಾ ಇದ್ದಂತೆ, ವೀಡಿಯೊ ಬಾಂಬ್ ಸ್ಫೋಟಗೊಳ್ತಾ ಇದ್ದಂತೆ ಗೌಡರ ಮನೆಯಲ್ಲಿ ಬಿರುಗಾಳಿ ಎದ್ದಿದ್ರೆ, ಜೆಡಿಎಸ್ ಕೋಟೆಯೊಳಗೆ ಸುನಾಮಿಯೇ ಎದ್ದು ಬಿಟ್ಟಿದೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಗ್ಯಾರಂಟಿಯಿಂದ ಜೋಶಿ ಗೆಲುವು ಕಷ್ಟನಾ? ಮೋದಿ ಬೈತಾರೆ ಆದ್ರೂ ಬಂಡತನದಿಂದ ಬರ್ತೀವಿ!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more