News Hour: ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’, ಕುಮಾರಸ್ವಾಮಿ ಕೆಂಡ!

News Hour: ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’, ಕುಮಾರಸ್ವಾಮಿ ಕೆಂಡ!

Published : Aug 14, 2023, 11:24 PM IST

ಕಾಂಬೋಡಿಯಾ ಪ್ರವಾಸದಿಂದ ವಾಪಾಸ್‌ ಬರುತ್ತಿದ್ದಂತೆ ಎಚ್‌ಡಿ ಕುಮಾರಸ್ವಾಮಿ ಮತ್ತೆ ಸಿಡಿದೆದಿದ್ದಾರೆ. ಪದೇ ಪದೇ ವಿದೇಶ ಪ್ರವಾಸ ಮಾಡುವ ಎಚ್‌ಡಿಕೆ ವಿದೇಶದಲ್ಲೇ ಇರಲಿ ಎಂದಿದ್ದ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಬೆಂಗಳೂರು (ಆ.14): ಯುರೋಪ್‌ ಪ್ರವಾಸದಿಂದ ಬರುತ್ತಿದ್ದಂತೆ ಕಾಂಗ್ರೆಸ್‌ ಸರ್ಕಾರದ ಮೇಲೆ ಕಮೀಷನ್‌ ಬಾಂಬ್‌ ಎಸೆದಿದ್ದ ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಈಗ ಕಾಂಬೋಡಿಯಾ ಪ್ರವಾಸದಿಂದ ವಾಪಾಸಾದಾಗಲೂ ಸರ್ಕಾರದ ವಿರುದ್ಧ ಸಿಡಿದೆದಿದ್ದಾರೆ. ಹೆಚ್ಡಿಕೆ ವಿದೇಶದಲ್ಲಿ ಇರಲಿ ಎಂದಿದ್ದ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’ ಎಂದು ಪ್ರಶ್ನೆ ಮಾಡಿದ್ದಾರೆ.

ವಿಮಾನ ನಿಲ್ದಾಣದಲ್ಲಿಯೇ  ಕಾಂಗ್ರೆಸ್ ಸಚಿವರ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು. ‘ಇವರ ಪಾಪದ ದುಡ್ಡಲ್ಲಿ ನಾನು ವಿದೇಶಕ್ಕೆ ಹೋಗಬೇಕಾ?, ಕಾಂಬೋಡಿಯಾಗೆ ಸ್ನೇಹಿತರ ಆಹ್ವಾನ ಇತ್ತು, ನಾನು ಹೋಗಿದ್ದೆ, ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಇಟ್ಟಿದ್ದೆ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಗಾದೆ ಮಾತಿದೆ. ಯಾವ ದೇಶದಲ್ಲಿ ಏನಿದೆ ಅಂತಾ ತಿಳಿದುಕೊಳ್ಳಬೇಕಲ್ಲ ಹೋಗಿದ್ದೆ ಎಂದು ಹೇಳಿದ್ದಾರೆ.

ಫ್ಯಾಮಿಲಿ ಜೊತೆ ನಿಖಿಲ್ ಕುಮಾರಸ್ವಾಮಿ ವಿದೇಶ ಪ್ರವಾಸ; ಅತ್ತೆ-ಸೊಸೆ ಸಖತ್ ಸ್ಟೈಲಿಶ್ ಎಂದ ನೆಟ್ಟಿಗರು

ರಾಜ್ಯಪಾಲರಿಗೆ ದೂರು ನಕಲಿ ಪತ್ರ ಎಂದು ಆರೋಪಿಸಿದ್ದ ಚೆಲುವರಾಯಸ್ವಾಮಿಗೂ ಕುಮಾರಸ್ವಾಮಿ ಕೌಂಟರ್‌ ನೀಡಿದ್ದಾರೆ. ದೂರಿನ ಪತ್ರ ನಕಲಿ ಆಗಿದ್ರೆ ಗವರ್ನರ್ ಬಳಿ ಹೋಗಿದ್ಯಾಕೆ. ಹೌದಪ್ಪ.. ಆ ಪತ್ರಕ್ಕೆ ನಾನೇ ಸಹಿ ಹಾಕಿದ್ದು. ಎಲ್ಲಾ ಕಡೆ ನನ್ನ ಹೆಸರು ಯಾಕ್ ತಳುಕು ಹಾಕ್ತೀರಿ ಎಂದು ಕಿಡಿಕಾರಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more