News Hour: ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’, ಕುಮಾರಸ್ವಾಮಿ ಕೆಂಡ!

News Hour: ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’, ಕುಮಾರಸ್ವಾಮಿ ಕೆಂಡ!

Published : Aug 14, 2023, 11:24 PM IST

ಕಾಂಬೋಡಿಯಾ ಪ್ರವಾಸದಿಂದ ವಾಪಾಸ್‌ ಬರುತ್ತಿದ್ದಂತೆ ಎಚ್‌ಡಿ ಕುಮಾರಸ್ವಾಮಿ ಮತ್ತೆ ಸಿಡಿದೆದಿದ್ದಾರೆ. ಪದೇ ಪದೇ ವಿದೇಶ ಪ್ರವಾಸ ಮಾಡುವ ಎಚ್‌ಡಿಕೆ ವಿದೇಶದಲ್ಲೇ ಇರಲಿ ಎಂದಿದ್ದ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಬೆಂಗಳೂರು (ಆ.14): ಯುರೋಪ್‌ ಪ್ರವಾಸದಿಂದ ಬರುತ್ತಿದ್ದಂತೆ ಕಾಂಗ್ರೆಸ್‌ ಸರ್ಕಾರದ ಮೇಲೆ ಕಮೀಷನ್‌ ಬಾಂಬ್‌ ಎಸೆದಿದ್ದ ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಈಗ ಕಾಂಬೋಡಿಯಾ ಪ್ರವಾಸದಿಂದ ವಾಪಾಸಾದಾಗಲೂ ಸರ್ಕಾರದ ವಿರುದ್ಧ ಸಿಡಿದೆದಿದ್ದಾರೆ. ಹೆಚ್ಡಿಕೆ ವಿದೇಶದಲ್ಲಿ ಇರಲಿ ಎಂದಿದ್ದ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’ ಎಂದು ಪ್ರಶ್ನೆ ಮಾಡಿದ್ದಾರೆ.

ವಿಮಾನ ನಿಲ್ದಾಣದಲ್ಲಿಯೇ  ಕಾಂಗ್ರೆಸ್ ಸಚಿವರ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು. ‘ಇವರ ಪಾಪದ ದುಡ್ಡಲ್ಲಿ ನಾನು ವಿದೇಶಕ್ಕೆ ಹೋಗಬೇಕಾ?, ಕಾಂಬೋಡಿಯಾಗೆ ಸ್ನೇಹಿತರ ಆಹ್ವಾನ ಇತ್ತು, ನಾನು ಹೋಗಿದ್ದೆ, ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಇಟ್ಟಿದ್ದೆ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಗಾದೆ ಮಾತಿದೆ. ಯಾವ ದೇಶದಲ್ಲಿ ಏನಿದೆ ಅಂತಾ ತಿಳಿದುಕೊಳ್ಳಬೇಕಲ್ಲ ಹೋಗಿದ್ದೆ ಎಂದು ಹೇಳಿದ್ದಾರೆ.

ಫ್ಯಾಮಿಲಿ ಜೊತೆ ನಿಖಿಲ್ ಕುಮಾರಸ್ವಾಮಿ ವಿದೇಶ ಪ್ರವಾಸ; ಅತ್ತೆ-ಸೊಸೆ ಸಖತ್ ಸ್ಟೈಲಿಶ್ ಎಂದ ನೆಟ್ಟಿಗರು

ರಾಜ್ಯಪಾಲರಿಗೆ ದೂರು ನಕಲಿ ಪತ್ರ ಎಂದು ಆರೋಪಿಸಿದ್ದ ಚೆಲುವರಾಯಸ್ವಾಮಿಗೂ ಕುಮಾರಸ್ವಾಮಿ ಕೌಂಟರ್‌ ನೀಡಿದ್ದಾರೆ. ದೂರಿನ ಪತ್ರ ನಕಲಿ ಆಗಿದ್ರೆ ಗವರ್ನರ್ ಬಳಿ ಹೋಗಿದ್ಯಾಕೆ. ಹೌದಪ್ಪ.. ಆ ಪತ್ರಕ್ಕೆ ನಾನೇ ಸಹಿ ಹಾಕಿದ್ದು. ಎಲ್ಲಾ ಕಡೆ ನನ್ನ ಹೆಸರು ಯಾಕ್ ತಳುಕು ಹಾಕ್ತೀರಿ ಎಂದು ಕಿಡಿಕಾರಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more