ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

Published : Jul 15, 2023, 11:14 AM IST

 ಇದುವರೆಗೂ ಕೇವಲ ಊಹಾಪೋಹದ ಹಂತದಲ್ಲಿ ಇದ್ದ ಬಿಜೆಪಿ ಜೆಡಿಎಸ್ ಮೈತ್ರಿ ಈಗ ಪಕ್ಕಾ ಆಗುವ ಲಕ್ಷಣಗಳು ಘೋಚರಿಸುತ್ತಿದೆ. ಸುವರ್ಣ ನ್ಯೂಸ್ ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ  ಈ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು (ಜು.15): ಇದುವರೆಗೂ ಕೇವಲ ಊಹಾಪೋಹದ ಹಂತದಲ್ಲಿ ಇದ್ದ ಬಿಜೆಪಿ ಜೆಡಿಎಸ್ ಮೈತ್ರಿ ಈಗ ಪಕ್ಕಾ ಆಗುವ ಲಕ್ಷಣಗಳು ಘೋಚರಿಸುತ್ತಿದೆ. ಸುವರ್ಣ ನ್ಯೂಸ್ ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ  ಈ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದು, ಎನ್ ಡಿಎ ಸಭೆ ಬಳಿಕ ಮೈತ್ರಿ ಅಧಿಕೃತವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.  ಎನ್‌ಡಿಎ ಮಿತ್ರ ಪಕ್ಷಗಳ ಸಭೆಗೂ ಮುನ್ನ ಮತ್ತೆ ಕೇಂದ್ರ  ಬಿಜೆಪಿ ನಾಯಕರ ಭೇಟಿ ಮಾಡಿ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದು, ಇಂದು ಸಂಜೆ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ  ಮೈತ್ರಿ ಗೆ  ಅಂತಿಮ ಮುದ್ರೆ ಬೀಳಲಿದೆ.

ಇನ್ನು ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಸುವರ್ಣನ್ಯೂಸ್ ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ, ಒಂದು ವರ್ಗದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಆಗಬೇಕು ಅನ್ನೋ ಭಾವನೆ ಇದೆ. ಆದರೆ ಅದು ಇನ್ನೂ ಭಾವನೆ ಹಂತದಲ್ಲಿ ಇದೆ.  ಯಾವುದೇ ರೀತಿಯ ಚಾಲನೆ ಇನ್ನೂ ಸಿಕ್ಕಿಲ್ಲ ಜನಗಳ ಭಾವನೆ ಬಗ್ಗೆ ನಾವು ಯಾವ ರೀತಿ ಸ್ಪಂದಿಸಬೇಕು ಅಂತ ಪಕ್ಷದಲ್ಲಿ ಕುಳಿತು ತೀರ್ಮಾನ ಮಾಡ್ತೀವಿ. ಕೇಂದ್ರ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ ಅನ್ನೋದು ಊಹಾಪೋಹಗಳು ಅಷ್ಟೇ. ನಾವಿನ್ನೂ ಯಾರನ್ನು ಭೇಟಿ ಮಾಡಿಲ್ಲ. ಭೇಟಿ ಮಾಡುವ ಸಂದರ್ಭ ಬಂದಾಗ ಜನತೆಗೆ ತಿಳಿಸಿಯೇ ಭೇಟಿ ಮಾಡ್ತೀನಿ ಎಂದು ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜುಲೈ 18ರಂದು ನಡೆಯಲಿರುವ  ಎನ್ ಡಿಎ ಸಭೆ ಬಗ್ಗೆ  ಕುತೂಹಲ ಮೂಡಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more