ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

Published : Jul 15, 2023, 11:14 AM IST

 ಇದುವರೆಗೂ ಕೇವಲ ಊಹಾಪೋಹದ ಹಂತದಲ್ಲಿ ಇದ್ದ ಬಿಜೆಪಿ ಜೆಡಿಎಸ್ ಮೈತ್ರಿ ಈಗ ಪಕ್ಕಾ ಆಗುವ ಲಕ್ಷಣಗಳು ಘೋಚರಿಸುತ್ತಿದೆ. ಸುವರ್ಣ ನ್ಯೂಸ್ ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ  ಈ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು (ಜು.15): ಇದುವರೆಗೂ ಕೇವಲ ಊಹಾಪೋಹದ ಹಂತದಲ್ಲಿ ಇದ್ದ ಬಿಜೆಪಿ ಜೆಡಿಎಸ್ ಮೈತ್ರಿ ಈಗ ಪಕ್ಕಾ ಆಗುವ ಲಕ್ಷಣಗಳು ಘೋಚರಿಸುತ್ತಿದೆ. ಸುವರ್ಣ ನ್ಯೂಸ್ ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ  ಈ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದು, ಎನ್ ಡಿಎ ಸಭೆ ಬಳಿಕ ಮೈತ್ರಿ ಅಧಿಕೃತವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.  ಎನ್‌ಡಿಎ ಮಿತ್ರ ಪಕ್ಷಗಳ ಸಭೆಗೂ ಮುನ್ನ ಮತ್ತೆ ಕೇಂದ್ರ  ಬಿಜೆಪಿ ನಾಯಕರ ಭೇಟಿ ಮಾಡಿ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದು, ಇಂದು ಸಂಜೆ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ  ಮೈತ್ರಿ ಗೆ  ಅಂತಿಮ ಮುದ್ರೆ ಬೀಳಲಿದೆ.

ಇನ್ನು ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಸುವರ್ಣನ್ಯೂಸ್ ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ, ಒಂದು ವರ್ಗದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಆಗಬೇಕು ಅನ್ನೋ ಭಾವನೆ ಇದೆ. ಆದರೆ ಅದು ಇನ್ನೂ ಭಾವನೆ ಹಂತದಲ್ಲಿ ಇದೆ.  ಯಾವುದೇ ರೀತಿಯ ಚಾಲನೆ ಇನ್ನೂ ಸಿಕ್ಕಿಲ್ಲ ಜನಗಳ ಭಾವನೆ ಬಗ್ಗೆ ನಾವು ಯಾವ ರೀತಿ ಸ್ಪಂದಿಸಬೇಕು ಅಂತ ಪಕ್ಷದಲ್ಲಿ ಕುಳಿತು ತೀರ್ಮಾನ ಮಾಡ್ತೀವಿ. ಕೇಂದ್ರ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ ಅನ್ನೋದು ಊಹಾಪೋಹಗಳು ಅಷ್ಟೇ. ನಾವಿನ್ನೂ ಯಾರನ್ನು ಭೇಟಿ ಮಾಡಿಲ್ಲ. ಭೇಟಿ ಮಾಡುವ ಸಂದರ್ಭ ಬಂದಾಗ ಜನತೆಗೆ ತಿಳಿಸಿಯೇ ಭೇಟಿ ಮಾಡ್ತೀನಿ ಎಂದು ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜುಲೈ 18ರಂದು ನಡೆಯಲಿರುವ  ಎನ್ ಡಿಎ ಸಭೆ ಬಗ್ಗೆ  ಕುತೂಹಲ ಮೂಡಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more