ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

Published : Jul 15, 2023, 11:14 AM IST

 ಇದುವರೆಗೂ ಕೇವಲ ಊಹಾಪೋಹದ ಹಂತದಲ್ಲಿ ಇದ್ದ ಬಿಜೆಪಿ ಜೆಡಿಎಸ್ ಮೈತ್ರಿ ಈಗ ಪಕ್ಕಾ ಆಗುವ ಲಕ್ಷಣಗಳು ಘೋಚರಿಸುತ್ತಿದೆ. ಸುವರ್ಣ ನ್ಯೂಸ್ ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ  ಈ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು (ಜು.15): ಇದುವರೆಗೂ ಕೇವಲ ಊಹಾಪೋಹದ ಹಂತದಲ್ಲಿ ಇದ್ದ ಬಿಜೆಪಿ ಜೆಡಿಎಸ್ ಮೈತ್ರಿ ಈಗ ಪಕ್ಕಾ ಆಗುವ ಲಕ್ಷಣಗಳು ಘೋಚರಿಸುತ್ತಿದೆ. ಸುವರ್ಣ ನ್ಯೂಸ್ ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ  ಈ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದು, ಎನ್ ಡಿಎ ಸಭೆ ಬಳಿಕ ಮೈತ್ರಿ ಅಧಿಕೃತವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.  ಎನ್‌ಡಿಎ ಮಿತ್ರ ಪಕ್ಷಗಳ ಸಭೆಗೂ ಮುನ್ನ ಮತ್ತೆ ಕೇಂದ್ರ  ಬಿಜೆಪಿ ನಾಯಕರ ಭೇಟಿ ಮಾಡಿ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದು, ಇಂದು ಸಂಜೆ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ  ಮೈತ್ರಿ ಗೆ  ಅಂತಿಮ ಮುದ್ರೆ ಬೀಳಲಿದೆ.

ಇನ್ನು ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಸುವರ್ಣನ್ಯೂಸ್ ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ, ಒಂದು ವರ್ಗದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಆಗಬೇಕು ಅನ್ನೋ ಭಾವನೆ ಇದೆ. ಆದರೆ ಅದು ಇನ್ನೂ ಭಾವನೆ ಹಂತದಲ್ಲಿ ಇದೆ.  ಯಾವುದೇ ರೀತಿಯ ಚಾಲನೆ ಇನ್ನೂ ಸಿಕ್ಕಿಲ್ಲ ಜನಗಳ ಭಾವನೆ ಬಗ್ಗೆ ನಾವು ಯಾವ ರೀತಿ ಸ್ಪಂದಿಸಬೇಕು ಅಂತ ಪಕ್ಷದಲ್ಲಿ ಕುಳಿತು ತೀರ್ಮಾನ ಮಾಡ್ತೀವಿ. ಕೇಂದ್ರ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ ಅನ್ನೋದು ಊಹಾಪೋಹಗಳು ಅಷ್ಟೇ. ನಾವಿನ್ನೂ ಯಾರನ್ನು ಭೇಟಿ ಮಾಡಿಲ್ಲ. ಭೇಟಿ ಮಾಡುವ ಸಂದರ್ಭ ಬಂದಾಗ ಜನತೆಗೆ ತಿಳಿಸಿಯೇ ಭೇಟಿ ಮಾಡ್ತೀನಿ ಎಂದು ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜುಲೈ 18ರಂದು ನಡೆಯಲಿರುವ  ಎನ್ ಡಿಎ ಸಭೆ ಬಗ್ಗೆ  ಕುತೂಹಲ ಮೂಡಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more