'ಸೋಮಣ್ಣ ಜನತಾ ಬಜಾರ್‌ನಲ್ಲಿ ಬಟ್ಟೆ ಕದ್ದು ಸಿಕ್ಕಿಬಿದ್ದಿದ್ದ'

Nov 29, 2019, 4:45 PM IST

ಬೆಂಗಳೂರು, (ನ.29): 15 ಕ್ಷೇತ್ರಗಳ ಉಪಚುನಾವಣೆ ಕಾವೇರಿದೆ. ಇದರ ಮಧ್ಯೆ ಮೂರು ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿದ್ದು, ಬಿಜೆಪಿ ಸಚಿವ ವಿ.ಸೋಮಣ್ಣ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ದೇವೇಗೌಡರ ಮುಂದೆ ವಿ.ಸೋಮಣ್ಣ ಬಚ್ಚಾ, ಅವರಿಗೆ ದೇವೇಗೌಡರ ಬಗ್ಗೆ ಮಾತನಾಡುವ ಯೋಗ್ಯತೆ ಇದೆಯಾ?' ಎಂದು ಪ್ರಶ್ನೆ ಮಾಡಿದ್ದಾರೆ.

'ವಿ.ಸೋಮಣ್ಣ ಜನತಾ ಬಜಾರ್‌ ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರು. ಯಾರ್ಯಾರಿಗೆ, ಯಾವಾಗೆಲ್ಲಾ ಕಾಲಿಗೆ ಬಿದ್ದು ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ ಎಂಬುದು ಗೊತ್ತಿದೆ' ಎಂದು ಕುಮಾರಸ್ವಾಮಿ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...