ದೊಣ್ಣೆ ನಾಯಕನ ಅಪ್ಪಣೆ ಪಡೆದು ಟಿಕೆಟ್ ಕೊಡ್ಬೇಕಾ? ಸಿದ್ದು ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

Oct 12, 2021, 3:40 PM IST

ಬೆಂಗಳೂರು, (ಅ.12): ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಸಿದ್ದರಾಮಯ್ಯ (Siddaramaiah )ನಡುವಿನ ವಾಕ್ಸಮರ ಮುಂದುವರೆದಿದೆ.

ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರ್ತಾರೆ, ನಾನೇನು ಮಾಡ್ಲಿ? ಸಿದ್ದರಾಮಯ್ಯ

ಬೈ ಎಲೆಕ್ಷನ್ ಅಭ್ಯರ್ಥಿಗೆ ಸಿದ್ದರಾಮಯ್ಯನವರ ಹೇಳಿಕೆಗೆ ಕುಮಮಾರಸ್ವಾಮಿ ಕೆಂಡಾಮಂಡಲರಾಗಿದ್ದು, ನಾನು ಚುನಾವಣೆಗೆ ಯಾರನ್ನ ಬೇಕಾದ್ರು ನಿಲ್ಲಿಸುತ್ತೇನೆ. ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ ಎಂದು ವಾಗ್ದಾಳಿ ನಡೆಸಿದ್ದಾರೆ.