ರಾಮನಗರದಲ್ಲಿ ಒಕ್ಕಲಿಗರ ಬೆಂಬಲ ಕೇಳಿದ ಡಿಕೆಶಿ, ಇದಕ್ಕೆ ಎಚ್‌ಡಿಕೆ ಹೇಳಿದ್ದಿಷ್ಟು

Jul 20, 2022, 3:22 PM IST

ಬೆಂಗಳೂರು, (ಜುಲೈ.20): ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಚಾನ್ಸ್ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಸಿಎಂ ಆಗಲು ನನಗೂ ಒಂದು ಅವಕಾಶ ಕೊಡಿ, ನಿಮ್ಮ ಸೇವೆ ಮಾಡೋಕೆ ಸಿದ್ದ: ಡಿಕೆಶಿ

ಮಂಗಳವಾರ ರಾಮನಗರದಲ್ಲಿ ಮಾತನಾಡಿದ ಅವರು, ನನಗೆ ಹೂವಿನ ಹಾರ ಬೇಡ. ನಾನು ಯಾರನ್ನು ನಿಲ್ಲಿಸುತ್ತೆನೆ ಅವರಿಗೆ ಸಹಕಾರ ಕೊಡಬೇಕು. ನನಗೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಸೇವೆಯನ್ನ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಪರೋಕ್ಷವಾಗಿ ರಾಮಗರದಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕೆಂದು ಹೇಳುವ ಮೂಲಕ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಅಲ್ಲದೇ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿ ಕೊಟ್ಟಿದ್ದು ಹೀಗೆ.