ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

Published : Feb 07, 2023, 06:05 PM ISTUpdated : Feb 07, 2023, 06:15 PM IST

ನಾನು ಯಾವುದೇ ಸಮಾಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ.
 

ಚುನಾವಣೆಯ ನಂತರ ಮುಂದಿನ ದಿನಗಳಲ್ಲಿ ಪ್ರಲ್ಹಾದ್ ಜೋಷಿಯವರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂದು ನಾನು ಹೇಳಿದ್ದೇನೆ. ಬ್ರಾಹ್ಮಣ ಸಮಾಜದಿಂದ ಮುಖ್ಯಮಂತ್ರಿ ಆಗಬಾರದು ಎಂದು ಹೇಳಲಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಬ್ರಾಹ್ಮಣ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು, ಇನ್ನು ಯಾವುದೇ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು. ಅದು ಈ ದೇಶದಲ್ಲಿ ಪ್ರತಿಯೊಂದು ಕುಟುಂಬಕ್ಕೆ, ಸಮಾಜಕ್ಕೆ ಕೊಟ್ಟಿರುವಂತ ಹಕ್ಕು ಅದನ್ನು ನಾನು ಖಂಡಿಸುವುದಿಲ್ಲ ಎಂದರು. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗಿಂತ ಹೆಚ್ಚಾಗಿ ಧರ್ಮದ ನಡುವೆ ದ್ವೇಷ ತರುವಂತದನ್ನು ಮಾಡಿದ್ದಾರೆ. ವಿರೋಧಿಗಳು ಏನೂ ಬೇಕಿದ್ರೂ ಟೀಕೆ ಮಾಡಲಿ, ಸರ್ವಜನಾಂಗದ ಶಾಂತಿಯ ತೋಟವನ್ನು ಕಾಪಾಡುವ ನಿಟ್ಟಿನಲ್ಲಿ ನಾನು ಇರುವುದು. ನಾನು ನಿಖರ ಮಾಹಿತಿ ಆಧಾರದಲ್ಲೇ ಮಾತಾಡ್ತೀನಿ, ಸಂತೆ ಭಾಷಣ ಮಾಡಲ್ಲ ಎಂದು ಹೇಳಿದರು. ಅವರು ಕುಟುಂಬದ ಬಗ್ಗೆ ಪಕ್ಷದ ಬಗ್ಗೆ ಕಾರ್ಯಕ್ರಮದ ಬಗ್ಗೆ ಹೇಳಿರುವುದನ್ನು ಸ್ಪೋಟಿವ್‌ ಆಗಿ ತಗೊಂಡಿದ್ದೇನೆ. ವಾಸ್ತವ ಅಂಶ ಸತ್ಯಾಸತ್ಯತೆಯಿಂದ ಇದ್ದಾಗ ಮಾತ್ರ ನಾನು ಮಾತಾಡುತ್ತೇನೆ  ಎಂದು ತಿಳಿಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more