ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

ಅಕ್ಕಿ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ವೇ? ಕಾಂಗ್ರೆಸ್ ಉಚಿತ ಗ್ಯಾರೆಂಟಿ ವಿರುದ್ಧ ಹೆಚ್‌ಡಿಕೆ ಗರಂ!

Published : Jun 21, 2023, 11:37 PM IST

ಒಂದು ತಿಂಗಳನಿಂದ ಕಾಂಗ್ರೆಸ್ ಡ್ರಾಮ, ಅಕ್ಕಿ ಭಾಗ್ಯ ವಿರುದ್ದ ಕುಮಾರಸ್ವಾಮಿ ಕೆಂಡಾಮಂಡಲ, ಹಿರಿಯರ ಹೊಂದಾಣಿಕೆ ಒಪ್ಪಿಕೊಂಡ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್, ಅನ್ನಭಾಗ್ಯ ಅಕ್ಕಿ ರಾಜಕೀಯ ದೆಹಲಿಗೆ ಶಿಫ್ಟ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಉಚಿತ ಭಾಗ್ಯದ ವಿರುದ್ದ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. 10 ಕೆಜಿ ಅಕ್ಕಿ ಕೊಡ್ತೀವಿ ಎಂದು ಕಾಂಗ್ರೆಸ್ ಘೋಷಣೆ ಮಾಡಿದಾಗ, ಸಮಸ್ಯೆಗಳ ಅರಿವು ಇರಲಿಲ್ಲವೇ? ಎಫ್‌ಸಿಗೆ ಪತ್ರ ಬರೆದಿದ್ದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಇದು ಉಡಾಫೆ ಮಾತು. ಕೇಂದ್ರದ  ಇಲಾಖೆ ಜೊತೆ ಸಿಎಂ ಅಥವಾ ಜವಾಬ್ದಾರಿಯುತ ಮಂತ್ರಿ ಕಳುಹಿಸಿ ಚರ್ಚೆ ನಡೆಸಬೇಕಿತ್ತು. ಕೇಂದ್ರಕ್ಕೆ ಅವರದ್ದೇ ಆದ ಕಮಿಟ್‌ಮೆಂಟ್ ಇದೆ. ನೀವು ಕೇಳಿದ ತಕ್ಷಣ ಅವರು ಯಾಕೆ ಕೊಡುತ್ತಾರೆ. ಜನತೆಗೆ ನೀವು ಮಾತು ಕೊಟ್ಟಿದ್ದೀರಿ. ನೀವು ಹೇಗಾದರು ಮಾಡಿ ಕೊಡಬೇಕು. ಇದೀಗ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.  ಕೇಂದ್ರದ ವಿರುದ್ದ ಪ್ರತಿಭಟನೆ ಮಾಡಲು ನಿಮಗೇನು ಹಕ್ಕಿದೆ? ಯಾವನೋ ಬಂದು ಚುನಾವಣೆ ತಂತ್ರ ಮಾಡಿದ್ದಾನೆ. ಇವರು ಘೋಷಣೆ ಮಾಡಿ ಈಗ ಡ್ರಾಮ ಆಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more