ಗ್ಯಾರಂಟಿ ಯೋಜನೆಗೆ ಹೆಬ್ಬಾರ್ ಬೆಂಬಲ: ಬಿಜೆಪಿ ಟೀಕೆಗೆ ತಿರುಗೇಟು! Shivarama Hebbar on Guarantee schemes

Published : Feb 22, 2025, 07:01 PM IST

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕಾಗಿ ಬಣ ರಾಜಕೀಯ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಶಿರಸಿಯಲ್ಲಿ ಬಿಜೆಪಿ ರೆಬೆಲ್ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಲ್ಲಿ ಎಷ್ಟು ಬಣಗಳಿವೆ ಎಂದು ಲೆಕ್ಕ ಮಾಡುತ್ತಿದ್ದೇನೆ, ಅಂಕೆ-ಸಂಖ್ಯೆ ಸಿಕ್ಕರೆ ಹೇಳುತ್ತೇನೆ. ಬಿಜೆಪಿಯ ವ್ಯವಸ್ಥೆಯಿಂದ ಬೇಸತ್ತು ನಾನು ದೂರ ಉಳಿದಿದ್ದೇನೆ. ಸದ್ಯಕ್ಕೆ ಯಾವುದೇ ವಿವಾದಕ್ಕೆ ಬೀಳಬಾರದು ಎಂದು ಸುಮ್ಮನಿದ್ದೇನೆ. ಯಾರ್ಯಾರ ನಿಲುವು ಸರಿ, ಯಾರ್ಯಾರ ನಿಲುವು ತಪ್ಪು ಎನ್ನುವುದು ಇನ್ನು ಸ್ವಲ್ಪ ದಿನದಲ್ಲಿ ಗೊತ್ತಾಗುತ್ತದೆ. ನಾವು (ನಾನು ಮತ್ತು ಸೋಮಶೇಖರ್) ನಿರ್ಣಯ ತೆಗೆದುಕೊಂಡಾಗ ತಪ್ಪು ಎಂದು ಹೇಳಿದವರೇ ಈಗ ತಪ್ಪು ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಮತ್ತು ಯತ್ನಾಳ್ ವಿರುದ್ಧ ಪರೋಕ್ಷವಾಗಿ ಟೀಕಿಸಿದ್ದಾರೆ. ಶಾಸಕರ ಕ್ಷೇತ್ರಕ್ಕೆ ಅನುದಾನದ ವಿಚಾರವಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಯ ಮೇಲೆ ಪರಿಣಾಮವಾಗಿತ್ತು, ಇದೀಗ ಎಲ್ಲಾ ಸರಿಯಾಗುತ್ತಿದೆ. ಸಮಾನತೆಯ ಸಮಾಜ ನಿರ್ಮಾಣವಾಗಬೇಕು, ಇದಕ್ಕೆ ಇಂತಹ ಯೋಜನೆ ಕೊಡುವುದು ಅನಿವಾರ್ಯ ಎಂದರು. ಗ್ಯಾರಂಟಿ ಟೀಕೆ ಮಾಡಿದ ಬಿಜೆಪಿ ಮುಂಬೈ, ದೆಹಲಿಯಲ್ಲಿ ಏನು ಮಾಡಿತು ಎಂದು ಪ್ರಶ್ನಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more