ಸಿದ್ದರಾಮೋತ್ಸವ: ಹುಟ್ಟುಹಬ್ಬದ ನೆಪದಲ್ಲಿ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರ ಸಿದ್ದು?

Jun 28, 2022, 5:56 PM IST

ಬೆಂಗಳೂರು(ಜೂ.28): ಕರುನಾಡು ಸಾರ್ವತ್ರಿಕ ಚುನಾವಣೆ ಹಾದಿಯಲ್ಲಿರುವ ಪ್ರಸ್ತುತ ಘಟ್ಟದಲ್ಲಿ ಮಹತ್ವದ ರಾಜಕೀಯ ಸಂದೇಶ ರವಾನಿಸಲು ಹಾಗೂ ತಮ್ಮ ನಾಯಕನಿಗಿರುವ ಜನ ಮನ್ನಣೆಯನ್ನು ಸ್ಪಷ್ಟವಾಗಿ ನಿರೂಪಿಸುವ ಉದ್ದೇಶದಿಂದ ಬೃಹತ್‌ ಬಲ ಪ್ರದರ್ಶನ ನಡೆಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿ ಬಳಗ ಸಜ್ಜಾಗಿದೆ.

ಆ.3ಕ್ಕೆ ಸಿದ್ದು ಬಣ ‘ಶಕ್ತಿ ಪ್ರದರ್ಶನ’: 5 ಲಕ್ಷ ಜನರನ್ನು ಸೇರಿಸಿ 75ನೇ ಜನ್ಮದಿನ ಆಚರಣೆ!

ಇದಕ್ಕಾಗಿ ಆಗಸ್ಟ್‌ 3ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ. ಈ ಮೂಲಕ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರ?