ಅನರ್ಹರ ತೀರ್ಪು ಪ್ರಕಟ: ಬಿಜೆಪಿ ವಿರುದ್ಧ ತೊಡೆತಟ್ಟಿದ ಶರತ್‌ಗೆ ಲಾಸ್ಟ್ ವಾರ್ನಿಂಗ್..!

Nov 13, 2019, 3:16 PM IST

ಬೆಂಗಳೂರು, (ನ.13): ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅನರ್ಹರು ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರು ಸಹ ಇದಕ್ಕೆ ಪೂರಕವಾದ ಹೇಳಿಕೆಯನ್ನು ನೀಡುತ್ತಿದ್ದಾರೆ.

ಈ ಕುರಿತು ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿ, ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಸಂದೇಶ ರವಾನಿಸಿದ್ದಾರೆ. ನಮ್ಮ ಪಕ್ಷದವರು ಯಾರೇ ಆಗಲಿ ಅನರ್ಹ ಶಾಸಕರು ಸ್ಪರ್ಧಿಸುವುದನ್ನು ತಡೆಯುವುದಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಬಂಡಾಯ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. 

ಅದರಲ್ಲೂ ಹೊಸಕೋಟೆಯಲ್ಲಿ ಬಿಜೆಪಿ ವಿರುದ್ಧ ತೊಡೆತಟ್ಟಿರುವ ಶರತ್ ಬಚ್ಚೇಗೌಡಗೆ ವಿಶೇಷ ಸಂದೇಶವೊಂದನ್ನು ನೀಡಿದ್ದಾರೆ. ಹಾಗಾದ್ರೆ ಅಶೋಕ್ ಏನೆಲ್ಲಾ ಹೇಳಿದ್ರು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ...