Karnataka Election Result: ಹು-ಧಾ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ಗೆ 10,560 ಮತಗಳ ಹಿನ್ನೆಡೆ !

May 13, 2023, 11:01 AM IST

ಧಾರವಾಡ:  ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ರಾಜ್ಯದಲ್ಲಿ ಮುಂದಿನ ಐದು ವರ್ಷಗಳಿಗೆ ಯಾರು ಸರ್ಕಾರ ರಚಿಸಲಿದ್ದಾರೆ ಎಂಬುದಕ್ಕೆ ಉತ್ತರ ಸಿಗಲಿದೆ. ಇನ್ನೂ ಹುಬ್ಬಳ್ಳಿ -ಧಾರವಾಡ ಸೆಂಟ್ರಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಹಿನ್ನಡೆ ಅನುಭವಿಸಿದ್ದಾರೆ. ಜಗದೀಶ್‌ ಶೆಟ್ಟರ್‌ 10,560 ಮತಗಳ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ್‌ ಟೆಂಗಿನಕಾಯಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ಜಗದೀಶ್‌ ಶೆಟ್ಟರ್‌ ಸೋಲುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ: Shimoga Election Results: ಮಲೆನಾಡಿನಲ್ಲಿ ಯಾರಿಗೆ ಗೆಲುವು, ಸೋಲು? ಇಲ್ಲಿದೆ ಪಕ್ಕಾ ಲೆಕ್ಕ ..!