Hubli Dharwad Central Election Results: ಜಗದೀಶ್‌ ಶೆಟ್ಟರ್‌ಗೆ ಹಿನ್ನೆಡೆ, ಮಹೇಶ್‌ ಟೆಂಗಿನ ಕಾಯಿ ಮುನ್ನಡೆ

May 13, 2023, 10:37 AM IST

ಧಾರವಾಡ:  ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ರಾಜ್ಯದಲ್ಲಿ ಮುಂದಿನ ಐದು ವರ್ಷಗಳಿಗೆ ಯಾರು ಸರ್ಕಾರ ರಚಿಸಲಿದ್ದಾರೆ ಎಂಬುದಕ್ಕೆ ಉತ್ತರ ಸಿಗಲಿದೆ. ಇನ್ನೂ ಹುಬ್ಬಳ್ಳಿ -ಧಾರವಾಡ ಸೆಂಟ್ರಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಹಿನ್ನಡೆ ಅನುಭವಿಸಿದ್ದಾರೆ. ಮಹೇಶ್ ಟೆಂಗಿನ ಕಾಯಿ ಮುನ್ನಡೆ ಸಾಧಿಸಿದ್ದಾರೆ. ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕರಾಗಿದ್ದ ಜಗದೀಶ್ ಶೆಟ್ಟರ್, ಬಿಜೆಪಿ ಟಿಕೆಟ್ ನಿರಾಕರಿಸಿದ ಬಳಿಕ ಬಂಡಾಯ ಎದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತ ಮಹೇಶ್ ಟೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಗಿತ್ತು.

ಇದನ್ನೂ ವೀಕ್ಷಿಸಿ: Shimoga Election Results: ಮಲೆನಾಡಿನಲ್ಲಿ ಯಾರಿಗೆ ಗೆಲುವು, ಸೋಲು? ಇಲ್ಲಿದೆ ಪಕ್ಕಾ ಲೆಕ್ಕ ..!