CP Yogeshwar VS DK Shivakumar: ಕನಕಪುರದಲ್ಲಿ ಡಿಕೆಶಿಗೆ ಯೋಗೇಶ್ವರ್ ಸವಾಲು, ಅಲ್ಲಿಂದಲೇ ಸ್ಪರ್ಧೆ.?

CP Yogeshwar VS DK Shivakumar: ಕನಕಪುರದಲ್ಲಿ ಡಿಕೆಶಿಗೆ ಯೋಗೇಶ್ವರ್ ಸವಾಲು, ಅಲ್ಲಿಂದಲೇ ಸ್ಪರ್ಧೆ.?

Suvarna News   | Asianet News
Published : Jan 08, 2022, 05:15 PM ISTUpdated : Jan 08, 2022, 05:59 PM IST

ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ (kanakapura) ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಮೇಲ್ಮನೆ ಸದಸ್ಯಸಿ.ಪಿ.ಯೋಗೇಶ್ವರ್‌ (CP Yogeshwar) ಹೇಳಿದ್ದಾರೆ. 
 

ಬೆಂಗಳೂರು (ಜ. 08): ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ (Kanakapura) ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳುವ ಮೂಲಕ ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ (CP Yogeshwar) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಟಾಂಗ್‌ ನೀಡಿದ್ದಾರೆ.

 

 ಡಿ.ಕೆ.ಶಿವಕುಮಾರ್‌ (DK Shivakumar)  ಮತ್ತು ನನ್ನ ನಡುವೆ ಆರಂಭದಿಂದಲೂ ಕಿತ್ತಾಟ ಇದೆ. ನಾನು ಎಂದೂ ಡಿಕೆಎಸ್‌ ಸಹೋದರರ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ, ಮುಂದೆಯೂ ಮಾಡಿಕೊಳ್ಳುವುದಿಲ್ಲ. ಅವರ ಜೊತೆ ಹೋಗುವುದು ಇರುಳು ಕಂಡ ಬಾವಿಯಲ್ಲಿ ಹಗಲು ಬಿದ್ದಂತಾಗುತ್ತದೆ ಎಂದು ಎಂಎಲ್ಸಿ ಯೋಗೇಶ್ವರ್‌ ವ್ಯಂಗ್ಯವಾಡಿದ್ದಾರೆ. ಕಳೆದ 25 ವರ್ಷಗಳಿಂದ ಅವರು ನನಗೆ ಕಿರುಕುಳ ಕೊಟ್ಟು ಕೊಂಡು ಬಂದಿದ್ದಾರೆ. ಅವರ ಜೊತೆಗೆ ನಾನು ಹೇಗೆ ಹೋಗಲಿ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಯಾವ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ವರಿಷ್ಠರು ಸೂಚಿಸಿದರೆ ಕನಕಪುರದಿಂದ ಸ್ಪರ್ಧಿಸಲು ಸಿದ್ಧ ಎಂದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more