ಯಡಿಯೂರಪ್ಪ 8 ದಿನ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿದ್ರೆ ಬಿಜೆಪಿ 50 ಸೀಟನ್ನೂ ಗೆಲ್ಲೊದಿಲ್ಲ!

ಯಡಿಯೂರಪ್ಪ 8 ದಿನ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿದ್ರೆ ಬಿಜೆಪಿ 50 ಸೀಟನ್ನೂ ಗೆಲ್ಲೊದಿಲ್ಲ!

Published : Apr 13, 2023, 01:22 PM IST

ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ ನೀವು ಮೊಬೈಲ್‌ ಸ್ವಿಚ್ ಆಫ್ ಮಾಡಿ. ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ.

ಬೆಂಗಳೂರು (ಏ.13): ಬಿಜೆಪಿ ಹೈ ಕಮಾಂಡ್‌ನಿಂದ ನನಗೆ ಟಿಕೆಟ್ ಕೈ ತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯೇ ಮುಖ್ಯ ಕಾರಣವಾಗಿದ್ದಾರೆ. ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ ನೀವು ಮೊಬೈಲ್‌ ಸ್ವಿಚ್ ಆಫ್ ಮಾಡಿ. ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಈ ನಡೆಯನ್ನು ನಾನು ನಿರೀಕ್ಷೆ ಮಾಡಿದ್ದೆನು. ಬಿಜೆಪಿ ಹೈ ಕಮಾಂಡ್‌ನಿಂದ ನನಗೆ ಟಿಕೆಟ್ ಕೈ ತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯೇ ಮುಖ್ಯ ಕಾರಣವಾಗಿದ್ದಾರೆ. ಸಿಟಿ ರವಿ ವೈಯುಕ್ತಿಕ ದ್ವೇಷದಿಂದ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಸಿಟಿ ರವಿ ಪಕ್ಷಕ್ಕೆ ಒಳೆಯದು ಮಾಡೋದಿಲ್ಲ. ಬಿಜೆಪಿ ಮುಗಿಸುವವರೆಗೆ ಸಿ.ಟಿ. ರವಿ ವಿಶ್ರಾಂತಿ ಪಡೆಯಲ್ಲ. ನಾನು ರೈತರ ಪರವಾಗಿ ಪ್ರತಿಭಟನೆ ಮಾಡಿದ್ದೆ, ಅವರಿಗೆ ಪರಿಹಾರ ಕೊಡಿಸುವಲ್ಲಿಯೂ ನಾನು ಸಫಲನಾಗಿದ್ದೆ ಅದನ್ನು ಹೈಕಮಾಂಡ್ ಗೆ ತಪ್ಪಾಗಿ ಅರ್ಥೈಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಯಾವುದಾದರೂ ಪಕ್ಷಕ್ಕೆ ಹೋಗುತ್ತೇನೆ. ನಾನೇನು ರಾಜಕೀಯದಲ್ಲಿ ಸನ್ಯಾಸಿ ಅಲ್ಲ. ನಮ್ಮ ಕಾರ್ಯಕರ್ತರೊಂದಿಗೆ ಮಾತನಾಡಿ ನಿರ್ಧಾರ ಮಾಡುತ್ತೇನೆ. ಕಾಂಗ್ರೆಸ್‌ಗೆ ಹೋಗೋದಾ ಅಥ್ವಾ ಜೆಡಿಎಸ್ ಗೆ ಹೋಗೋದಾ ಅನ್ನುವ ನಿರ್ಧಾರವನ್ನು ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವೆನು. ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ. ನೀವು ದಯವಿಟ್ಟು ಮೊಬೈಲ್‌ ಸ್ವಿಚ್ ಆಫ್ ಮಾಡಿ. ಒಂದು ವೇಳೆ ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more