ಯಡಿಯೂರಪ್ಪ 8 ದಿನ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿದ್ರೆ ಬಿಜೆಪಿ 50 ಸೀಟನ್ನೂ ಗೆಲ್ಲೊದಿಲ್ಲ!

ಯಡಿಯೂರಪ್ಪ 8 ದಿನ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿದ್ರೆ ಬಿಜೆಪಿ 50 ಸೀಟನ್ನೂ ಗೆಲ್ಲೊದಿಲ್ಲ!

Published : Apr 13, 2023, 01:22 PM IST

ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ ನೀವು ಮೊಬೈಲ್‌ ಸ್ವಿಚ್ ಆಫ್ ಮಾಡಿ. ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ.

ಬೆಂಗಳೂರು (ಏ.13): ಬಿಜೆಪಿ ಹೈ ಕಮಾಂಡ್‌ನಿಂದ ನನಗೆ ಟಿಕೆಟ್ ಕೈ ತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯೇ ಮುಖ್ಯ ಕಾರಣವಾಗಿದ್ದಾರೆ. ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ ನೀವು ಮೊಬೈಲ್‌ ಸ್ವಿಚ್ ಆಫ್ ಮಾಡಿ. ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಈ ನಡೆಯನ್ನು ನಾನು ನಿರೀಕ್ಷೆ ಮಾಡಿದ್ದೆನು. ಬಿಜೆಪಿ ಹೈ ಕಮಾಂಡ್‌ನಿಂದ ನನಗೆ ಟಿಕೆಟ್ ಕೈ ತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯೇ ಮುಖ್ಯ ಕಾರಣವಾಗಿದ್ದಾರೆ. ಸಿಟಿ ರವಿ ವೈಯುಕ್ತಿಕ ದ್ವೇಷದಿಂದ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಸಿಟಿ ರವಿ ಪಕ್ಷಕ್ಕೆ ಒಳೆಯದು ಮಾಡೋದಿಲ್ಲ. ಬಿಜೆಪಿ ಮುಗಿಸುವವರೆಗೆ ಸಿ.ಟಿ. ರವಿ ವಿಶ್ರಾಂತಿ ಪಡೆಯಲ್ಲ. ನಾನು ರೈತರ ಪರವಾಗಿ ಪ್ರತಿಭಟನೆ ಮಾಡಿದ್ದೆ, ಅವರಿಗೆ ಪರಿಹಾರ ಕೊಡಿಸುವಲ್ಲಿಯೂ ನಾನು ಸಫಲನಾಗಿದ್ದೆ ಅದನ್ನು ಹೈಕಮಾಂಡ್ ಗೆ ತಪ್ಪಾಗಿ ಅರ್ಥೈಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಯಾವುದಾದರೂ ಪಕ್ಷಕ್ಕೆ ಹೋಗುತ್ತೇನೆ. ನಾನೇನು ರಾಜಕೀಯದಲ್ಲಿ ಸನ್ಯಾಸಿ ಅಲ್ಲ. ನಮ್ಮ ಕಾರ್ಯಕರ್ತರೊಂದಿಗೆ ಮಾತನಾಡಿ ನಿರ್ಧಾರ ಮಾಡುತ್ತೇನೆ. ಕಾಂಗ್ರೆಸ್‌ಗೆ ಹೋಗೋದಾ ಅಥ್ವಾ ಜೆಡಿಎಸ್ ಗೆ ಹೋಗೋದಾ ಅನ್ನುವ ನಿರ್ಧಾರವನ್ನು ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವೆನು. ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ. ನೀವು ದಯವಿಟ್ಟು ಮೊಬೈಲ್‌ ಸ್ವಿಚ್ ಆಫ್ ಮಾಡಿ. ಒಂದು ವೇಳೆ ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more