ಯಡಿಯೂರಪ್ಪ 8 ದಿನ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿದ್ರೆ ಬಿಜೆಪಿ 50 ಸೀಟನ್ನೂ ಗೆಲ್ಲೊದಿಲ್ಲ!

ಯಡಿಯೂರಪ್ಪ 8 ದಿನ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿದ್ರೆ ಬಿಜೆಪಿ 50 ಸೀಟನ್ನೂ ಗೆಲ್ಲೊದಿಲ್ಲ!

Published : Apr 13, 2023, 01:22 PM IST

ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ ನೀವು ಮೊಬೈಲ್‌ ಸ್ವಿಚ್ ಆಫ್ ಮಾಡಿ. ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ.

ಬೆಂಗಳೂರು (ಏ.13): ಬಿಜೆಪಿ ಹೈ ಕಮಾಂಡ್‌ನಿಂದ ನನಗೆ ಟಿಕೆಟ್ ಕೈ ತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯೇ ಮುಖ್ಯ ಕಾರಣವಾಗಿದ್ದಾರೆ. ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ ನೀವು ಮೊಬೈಲ್‌ ಸ್ವಿಚ್ ಆಫ್ ಮಾಡಿ. ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಈ ನಡೆಯನ್ನು ನಾನು ನಿರೀಕ್ಷೆ ಮಾಡಿದ್ದೆನು. ಬಿಜೆಪಿ ಹೈ ಕಮಾಂಡ್‌ನಿಂದ ನನಗೆ ಟಿಕೆಟ್ ಕೈ ತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯೇ ಮುಖ್ಯ ಕಾರಣವಾಗಿದ್ದಾರೆ. ಸಿಟಿ ರವಿ ವೈಯುಕ್ತಿಕ ದ್ವೇಷದಿಂದ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಸಿಟಿ ರವಿ ಪಕ್ಷಕ್ಕೆ ಒಳೆಯದು ಮಾಡೋದಿಲ್ಲ. ಬಿಜೆಪಿ ಮುಗಿಸುವವರೆಗೆ ಸಿ.ಟಿ. ರವಿ ವಿಶ್ರಾಂತಿ ಪಡೆಯಲ್ಲ. ನಾನು ರೈತರ ಪರವಾಗಿ ಪ್ರತಿಭಟನೆ ಮಾಡಿದ್ದೆ, ಅವರಿಗೆ ಪರಿಹಾರ ಕೊಡಿಸುವಲ್ಲಿಯೂ ನಾನು ಸಫಲನಾಗಿದ್ದೆ ಅದನ್ನು ಹೈಕಮಾಂಡ್ ಗೆ ತಪ್ಪಾಗಿ ಅರ್ಥೈಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಯಾವುದಾದರೂ ಪಕ್ಷಕ್ಕೆ ಹೋಗುತ್ತೇನೆ. ನಾನೇನು ರಾಜಕೀಯದಲ್ಲಿ ಸನ್ಯಾಸಿ ಅಲ್ಲ. ನಮ್ಮ ಕಾರ್ಯಕರ್ತರೊಂದಿಗೆ ಮಾತನಾಡಿ ನಿರ್ಧಾರ ಮಾಡುತ್ತೇನೆ. ಕಾಂಗ್ರೆಸ್‌ಗೆ ಹೋಗೋದಾ ಅಥ್ವಾ ಜೆಡಿಎಸ್ ಗೆ ಹೋಗೋದಾ ಅನ್ನುವ ನಿರ್ಧಾರವನ್ನು ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವೆನು. ಯಡಿಯೂರಪ್ಪ ಅವರನ್ನು ನಾನು ಕೇಳಿಕೊಳ್ತೇನೆ. ನೀವು ದಯವಿಟ್ಟು ಮೊಬೈಲ್‌ ಸ್ವಿಚ್ ಆಫ್ ಮಾಡಿ. ಒಂದು ವೇಳೆ ನೀವು ಸ್ವಿಚ್ ಆಫ್ ಮಾಡಿದರೆ ಬಿಜೆಪಿ 50 ಸೀಟ್ ಸಹ ಗೆಲ್ಲೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more