ವಿಧಾನಸಭೆಯಲ್ಲಿ ಸಿದ್ದು Vs ದಳಪತಿ ಮಾತಿನ ಮಲ್ಲಯುದ್ಧ..!: "ನಾವೇನು ನಿಮ್ಮ ಮುಲಾಜಿನಲ್ಲಿಲ್ಲ" ಹೆಚ್‌ಡಿಕೆ ಕೌಂಟರ್

ವಿಧಾನಸಭೆಯಲ್ಲಿ ಸಿದ್ದು Vs ದಳಪತಿ ಮಾತಿನ ಮಲ್ಲಯುದ್ಧ..!: "ನಾವೇನು ನಿಮ್ಮ ಮುಲಾಜಿನಲ್ಲಿಲ್ಲ" ಹೆಚ್‌ಡಿಕೆ ಕೌಂಟರ್

Published : Jul 07, 2023, 11:59 AM ISTUpdated : Jul 07, 2023, 12:00 PM IST

ಸಿಎಂ Vs ಮಾಜಿ ಸಿಎಂ ಕಾಳಗದ ಹಿಂದೆ ಮಂಡ್ಯ ಮಹಾಯುದ್ಧ..!
KSRTC ಡ್ರೈವರ್ ಆತ್ಮಹತ್ಯೆ ಯತ್ನ ಕೇಸ್‌ನಲ್ಲಿ ಭುಗಿಲೆದ್ದ ರಾಜಕೀಯ
ಮಂಡ್ಯದಲ್ಲಿ ಅಸ್ತಿತ್ವ ಅಲುಗಾಡಿಸಿದವರ ವಿರುದ್ಧ ಎಚ್‌ಡಿಕೆ ಯುದ್ಧ..!

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ (Kumaraswamy) ಮಧ್ಯೆ ವಿಧಾನಸಭೆಯಲ್ಲಿ ರಣರೋಚಕ ಕಾಳಗವೇ ನಡೆದು ಹೋಯ್ತು. ಒಬ್ಬರಿಗೊಬ್ಬರು ಹಿಗ್ಗಾಮುಗ್ಗಾ ಬೈದಾಡಿಕೊಂಡ್ರು. ವಿಧಾನಸಭಾ ಅಧಿವೇಶನ (Assembly session)  ಶುರುವಾದ ದಿನದಿಂದ್ಲೇ ಸರ್ಕಾರದ ವಿರುದ್ಧ ಮುಗಿ ಬಿದ್ದಿರೋ ದಳಪತಿ ಕುಮಾರಸ್ವಾಮಿ, ಗುರುವಾರ ಸದನದಲ್ಲೇ ಜಟಾಪಟಿಗೆ ನಿಂತ್ರು. ಎಚ್ಡಿಕೆ ಸವಾಲಿಗೆ ತೊಡೆ ತಟ್ಟಿ ನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೇನು ಕಮ್ಮಿ ಅನ್ನೋ ರೀತಿಯಲ್ಲಿ ಅಕ್ಷರಶಃ ಆರ್ಭಟಿಸಿದ್ರು. ಮಂಡ್ಯ(Mandya) ಅಂದ್ರೆ ರಾಜ್ಯ ರಾಜಕಾರಣದಲ್ಲಿ ಯಾವಾಗ್ಲೂ ಒಂದು ಸಂಚಲನ. ಸಕ್ಕರೆ ನಾಡು ಮಂಡ್ಯ ರಣ ರಣ ರಾಜಕಾರಣಕ್ಕೆ ಹೆಸರುವಾಸಿ. ಮಂಡ್ಯ ಮಣ್ಣಿನ ಕಣಕಣದಲ್ಲೂ ರಾಜಕೀಯವಿದೆ, ಮನೆ ಮನೆಯಲ್ಲೂ ರಾಜಕೀಯದ ಗಾಳಿಯಿದೆ. ಮಂಡ್ಯ ಮಣ್ಣಿನಿಂದ ಎದ್ದು ಬಂದು ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಸದ್ದು ಮಾಡಿದವರು ಒಬ್ರಲ್ಲ ಇಬ್ರಲ್ಲ. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಎದ್ದು ಬಂದದ್ದೂ ಇಲ್ಲಿಂದ್ಲೇ, ರೆಬೆಲ್ ಸ್ಟಾರ್ ಅಂಬರೀಶ್ ಅಬ್ಬರಿಸಿದ್ಲೂ ಮಂಡ್ಯದಿಂದ್ಲೇ.. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕಾವೇರಿ ಹೋರಾಟದ ಕೇಂದ್ರಸ್ಥಾನವಾಗಿದ್ದು, ದಳಪತಿಗಳನ್ನು ಮಟ್ಟ ಹಾಕಿ ರೆಬೆಲ್ ಲೇಡಿ ಸುಮಲತಾ ಅಂಬರೀಶ್ ಲೋಕಸಭೆಗೆ ಎಂಟ್ರಿ ಕೊಟ್ಟದ್ದೂ ಮಂಡ್ಯ ಮಣ್ಣಿನಿಂದ್ಲೇ.

ಇದನ್ನೂ ವೀಕ್ಷಿಸಿ:  Karnataka Budget 2023-24: ವಾಣಿಜ್ಯ, ಅಬಕಾರಿ ಶುಲ್ಕ, ಆಸ್ತಿ, ವೃತ್ತಿಪರ ತೆರಿಗೆ ಹೆಚ್ಚಳ ಸಾಧ್ಯತೆ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more