ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ

ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ

Published : Sep 09, 2023, 01:15 PM IST

ಬಿಜೆಪಿ-ಜೆಡಿಎಸ್‌ ಮೈತ್ರಿ ಹಾಗೂ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗುತ್ತದೆ ಎಂಬ ಊಹಾಪೋಹಕ್ಕೆ ಮಂಡ್ಯ ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಮಾತನಾಡಿದ್ದಾರೆ.
 

ಪಕ್ಷದ ತೀರ್ಮಾನಕ್ಕೆ ನಾವು ಬದ್ಧ. ಬಿಜೆಪಿ(BJP) ಮತ್ತು ಜೆಡಿಎಸ್(JDS) ಮೈತ್ರಿ ವಿಚಾರವನ್ನು ಮಾಧ್ಯಮದಲ್ಲಿ ಗಮನಿಸಿದ್ದೇವೆ. ಜೆಡಿಎಸ್‌ ವಿರುದ್ಧವಾಗಿ ನಾರಾಯಣಗೌಡ, ಅಶೋಕ್ ಜಯರಾಂ ಸಿಡಿದೆದ್ದು ಬಂದಿದ್ದಾರೆ. ನಾವು ಸಹ ಜೆಡಿಎಸ್ ವಿರುದ್ಧ ಚುನಾವಣೆ ಮಾಡಿಕೊಂಡು ಬಂದಿದ್ದೇವೆ. ಸದ್ಯ ಮಂಡ್ಯ ಎಂಪಿ ಸಹ ಬಿಜೆಪಿ‌ ಬೆಂಬಲಿತರು ಎಂದು ಮಂಡ್ಯದಲ್ಲಿ ಸುಮಲತಾ(Sumalatha) ಆಪ್ತ ಇಂಡುವಾಳು ಸಚ್ಚಿದಾನಂದ(Induvalu Satchidananda) ಹೇಳಿದ್ದಾರೆ. ಕಳೆದ ಎಂಎಲ್‌ಎ ಚುನಾವಣೆಯಲ್ಲಿ‌ ಬಿಜೆಪಿ ಪರ ಸುಮಲತಾ ಅವರು ಕೆಲಸ‌ ಮಾಡಿದ್ದಾರೆ. ಸುಮಲತಾ ಅವರು ಈ ಬಗ್ಗೆ ಏನು ಹೇಳ್ತಾರೆ ಗೊತ್ತಿಲ್ಲ. ನಾವು ಕೆಲ ತಿಂಗಳ ಹಿಂದೆ ಅಷ್ಟೇ ಚುನಾವಣೆ ಮುಗಿಸಿದ್ದೇವೆ. ಇಡೀ ದೇಶವೇ ಭಾರತವನ್ನು ತಿರುಗಿ ನೋಡ್ತಾ ಇದೆ. ಇದಕ್ಕೆ ಕಾರಣ ಮೋದಿ , ಬಿಜೆಪಿ ಪಕ್ಷದ ನಾಯಕತ್ವ. ಪಕ್ಷ ಮಾಡುವ ತೀರ್ಮಾನಕ್ಕೆ ನಾವು ಬದ್ಧ. ಮೈತಿ ಅನ್ನೋದು ನಮಗೆ ಅಧಿಕೃತ ಆಗಿಲ್ಲ. ಈ ರೀತಿ ತೀರ್ಮಾನ ಆದ್ರೆ ನಮ್ಮನ್ನ ಕರೆದು ಮಾತಾಡುತ್ತಾರೆ. ಮುಖ್ಯವಾಗಿ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ ಎಂದು ಅವರು ಹೇಳಿದರು.

ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ. ಆಲೋಚನೆ ಮಾಡಿ ಪಕ್ಷದ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾರ್ಯಕರ್ತರ ಭಾವನೆಗೆ ಧಕ್ಕೆ ತರದ ರೀತಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಲು ಒಳ್ಳೆಯ ನಿರ್ಧಾರವಾಗುತ್ತೆ. ಸುಮಲತಾ ಅವರು ಈಗ ಮಂಡ್ಯ ಎಂಪಿ. ನಾನು ಸುಮಲತಾ ಅವರ ಬೆಂಬಲಿಗನೂ‌ ಹೌದು, ಆಪ್ತನೂ ಹೌದು. ಈಗ ನಾನು ಪಕ್ಷದ ಚೌಟ್ಟಿನಲ್ಲಿ ಇದ್ದೀನಿ. ಬಿಜೆಪಿ ಏನು ತೀರ್ಮಾನ ಮಾಡುತ್ತೆ ಅದಕ್ಕೆ ನಾನು ಬದ್ಧ. ನಾನು ಬಿಜೆಪಿಯ ಕಾರ್ಯಕರ್ತ ಬಿಜೆಪಿ ಸಿದ್ದಾಂತಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಕುಮಾರಸ್ವಾಮಿ ಮಾತು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more