ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ

ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ

Published : Sep 09, 2023, 01:15 PM IST

ಬಿಜೆಪಿ-ಜೆಡಿಎಸ್‌ ಮೈತ್ರಿ ಹಾಗೂ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗುತ್ತದೆ ಎಂಬ ಊಹಾಪೋಹಕ್ಕೆ ಮಂಡ್ಯ ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಮಾತನಾಡಿದ್ದಾರೆ.
 

ಪಕ್ಷದ ತೀರ್ಮಾನಕ್ಕೆ ನಾವು ಬದ್ಧ. ಬಿಜೆಪಿ(BJP) ಮತ್ತು ಜೆಡಿಎಸ್(JDS) ಮೈತ್ರಿ ವಿಚಾರವನ್ನು ಮಾಧ್ಯಮದಲ್ಲಿ ಗಮನಿಸಿದ್ದೇವೆ. ಜೆಡಿಎಸ್‌ ವಿರುದ್ಧವಾಗಿ ನಾರಾಯಣಗೌಡ, ಅಶೋಕ್ ಜಯರಾಂ ಸಿಡಿದೆದ್ದು ಬಂದಿದ್ದಾರೆ. ನಾವು ಸಹ ಜೆಡಿಎಸ್ ವಿರುದ್ಧ ಚುನಾವಣೆ ಮಾಡಿಕೊಂಡು ಬಂದಿದ್ದೇವೆ. ಸದ್ಯ ಮಂಡ್ಯ ಎಂಪಿ ಸಹ ಬಿಜೆಪಿ‌ ಬೆಂಬಲಿತರು ಎಂದು ಮಂಡ್ಯದಲ್ಲಿ ಸುಮಲತಾ(Sumalatha) ಆಪ್ತ ಇಂಡುವಾಳು ಸಚ್ಚಿದಾನಂದ(Induvalu Satchidananda) ಹೇಳಿದ್ದಾರೆ. ಕಳೆದ ಎಂಎಲ್‌ಎ ಚುನಾವಣೆಯಲ್ಲಿ‌ ಬಿಜೆಪಿ ಪರ ಸುಮಲತಾ ಅವರು ಕೆಲಸ‌ ಮಾಡಿದ್ದಾರೆ. ಸುಮಲತಾ ಅವರು ಈ ಬಗ್ಗೆ ಏನು ಹೇಳ್ತಾರೆ ಗೊತ್ತಿಲ್ಲ. ನಾವು ಕೆಲ ತಿಂಗಳ ಹಿಂದೆ ಅಷ್ಟೇ ಚುನಾವಣೆ ಮುಗಿಸಿದ್ದೇವೆ. ಇಡೀ ದೇಶವೇ ಭಾರತವನ್ನು ತಿರುಗಿ ನೋಡ್ತಾ ಇದೆ. ಇದಕ್ಕೆ ಕಾರಣ ಮೋದಿ , ಬಿಜೆಪಿ ಪಕ್ಷದ ನಾಯಕತ್ವ. ಪಕ್ಷ ಮಾಡುವ ತೀರ್ಮಾನಕ್ಕೆ ನಾವು ಬದ್ಧ. ಮೈತಿ ಅನ್ನೋದು ನಮಗೆ ಅಧಿಕೃತ ಆಗಿಲ್ಲ. ಈ ರೀತಿ ತೀರ್ಮಾನ ಆದ್ರೆ ನಮ್ಮನ್ನ ಕರೆದು ಮಾತಾಡುತ್ತಾರೆ. ಮುಖ್ಯವಾಗಿ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ ಎಂದು ಅವರು ಹೇಳಿದರು.

ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ. ಆಲೋಚನೆ ಮಾಡಿ ಪಕ್ಷದ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾರ್ಯಕರ್ತರ ಭಾವನೆಗೆ ಧಕ್ಕೆ ತರದ ರೀತಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಲು ಒಳ್ಳೆಯ ನಿರ್ಧಾರವಾಗುತ್ತೆ. ಸುಮಲತಾ ಅವರು ಈಗ ಮಂಡ್ಯ ಎಂಪಿ. ನಾನು ಸುಮಲತಾ ಅವರ ಬೆಂಬಲಿಗನೂ‌ ಹೌದು, ಆಪ್ತನೂ ಹೌದು. ಈಗ ನಾನು ಪಕ್ಷದ ಚೌಟ್ಟಿನಲ್ಲಿ ಇದ್ದೀನಿ. ಬಿಜೆಪಿ ಏನು ತೀರ್ಮಾನ ಮಾಡುತ್ತೆ ಅದಕ್ಕೆ ನಾನು ಬದ್ಧ. ನಾನು ಬಿಜೆಪಿಯ ಕಾರ್ಯಕರ್ತ ಬಿಜೆಪಿ ಸಿದ್ದಾಂತಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಕುಮಾರಸ್ವಾಮಿ ಮಾತು

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more