ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ

ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ

Published : Sep 09, 2023, 01:15 PM IST

ಬಿಜೆಪಿ-ಜೆಡಿಎಸ್‌ ಮೈತ್ರಿ ಹಾಗೂ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗುತ್ತದೆ ಎಂಬ ಊಹಾಪೋಹಕ್ಕೆ ಮಂಡ್ಯ ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಮಾತನಾಡಿದ್ದಾರೆ.
 

ಪಕ್ಷದ ತೀರ್ಮಾನಕ್ಕೆ ನಾವು ಬದ್ಧ. ಬಿಜೆಪಿ(BJP) ಮತ್ತು ಜೆಡಿಎಸ್(JDS) ಮೈತ್ರಿ ವಿಚಾರವನ್ನು ಮಾಧ್ಯಮದಲ್ಲಿ ಗಮನಿಸಿದ್ದೇವೆ. ಜೆಡಿಎಸ್‌ ವಿರುದ್ಧವಾಗಿ ನಾರಾಯಣಗೌಡ, ಅಶೋಕ್ ಜಯರಾಂ ಸಿಡಿದೆದ್ದು ಬಂದಿದ್ದಾರೆ. ನಾವು ಸಹ ಜೆಡಿಎಸ್ ವಿರುದ್ಧ ಚುನಾವಣೆ ಮಾಡಿಕೊಂಡು ಬಂದಿದ್ದೇವೆ. ಸದ್ಯ ಮಂಡ್ಯ ಎಂಪಿ ಸಹ ಬಿಜೆಪಿ‌ ಬೆಂಬಲಿತರು ಎಂದು ಮಂಡ್ಯದಲ್ಲಿ ಸುಮಲತಾ(Sumalatha) ಆಪ್ತ ಇಂಡುವಾಳು ಸಚ್ಚಿದಾನಂದ(Induvalu Satchidananda) ಹೇಳಿದ್ದಾರೆ. ಕಳೆದ ಎಂಎಲ್‌ಎ ಚುನಾವಣೆಯಲ್ಲಿ‌ ಬಿಜೆಪಿ ಪರ ಸುಮಲತಾ ಅವರು ಕೆಲಸ‌ ಮಾಡಿದ್ದಾರೆ. ಸುಮಲತಾ ಅವರು ಈ ಬಗ್ಗೆ ಏನು ಹೇಳ್ತಾರೆ ಗೊತ್ತಿಲ್ಲ. ನಾವು ಕೆಲ ತಿಂಗಳ ಹಿಂದೆ ಅಷ್ಟೇ ಚುನಾವಣೆ ಮುಗಿಸಿದ್ದೇವೆ. ಇಡೀ ದೇಶವೇ ಭಾರತವನ್ನು ತಿರುಗಿ ನೋಡ್ತಾ ಇದೆ. ಇದಕ್ಕೆ ಕಾರಣ ಮೋದಿ , ಬಿಜೆಪಿ ಪಕ್ಷದ ನಾಯಕತ್ವ. ಪಕ್ಷ ಮಾಡುವ ತೀರ್ಮಾನಕ್ಕೆ ನಾವು ಬದ್ಧ. ಮೈತಿ ಅನ್ನೋದು ನಮಗೆ ಅಧಿಕೃತ ಆಗಿಲ್ಲ. ಈ ರೀತಿ ತೀರ್ಮಾನ ಆದ್ರೆ ನಮ್ಮನ್ನ ಕರೆದು ಮಾತಾಡುತ್ತಾರೆ. ಮುಖ್ಯವಾಗಿ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ ಎಂದು ಅವರು ಹೇಳಿದರು.

ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ. ಆಲೋಚನೆ ಮಾಡಿ ಪಕ್ಷದ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾರ್ಯಕರ್ತರ ಭಾವನೆಗೆ ಧಕ್ಕೆ ತರದ ರೀತಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಲು ಒಳ್ಳೆಯ ನಿರ್ಧಾರವಾಗುತ್ತೆ. ಸುಮಲತಾ ಅವರು ಈಗ ಮಂಡ್ಯ ಎಂಪಿ. ನಾನು ಸುಮಲತಾ ಅವರ ಬೆಂಬಲಿಗನೂ‌ ಹೌದು, ಆಪ್ತನೂ ಹೌದು. ಈಗ ನಾನು ಪಕ್ಷದ ಚೌಟ್ಟಿನಲ್ಲಿ ಇದ್ದೀನಿ. ಬಿಜೆಪಿ ಏನು ತೀರ್ಮಾನ ಮಾಡುತ್ತೆ ಅದಕ್ಕೆ ನಾನು ಬದ್ಧ. ನಾನು ಬಿಜೆಪಿಯ ಕಾರ್ಯಕರ್ತ ಬಿಜೆಪಿ ಸಿದ್ದಾಂತಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಕುಮಾರಸ್ವಾಮಿ ಮಾತು

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more