ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ

ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ

Published : Sep 09, 2023, 01:15 PM IST

ಬಿಜೆಪಿ-ಜೆಡಿಎಸ್‌ ಮೈತ್ರಿ ಹಾಗೂ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗುತ್ತದೆ ಎಂಬ ಊಹಾಪೋಹಕ್ಕೆ ಮಂಡ್ಯ ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಮಾತನಾಡಿದ್ದಾರೆ.
 

ಪಕ್ಷದ ತೀರ್ಮಾನಕ್ಕೆ ನಾವು ಬದ್ಧ. ಬಿಜೆಪಿ(BJP) ಮತ್ತು ಜೆಡಿಎಸ್(JDS) ಮೈತ್ರಿ ವಿಚಾರವನ್ನು ಮಾಧ್ಯಮದಲ್ಲಿ ಗಮನಿಸಿದ್ದೇವೆ. ಜೆಡಿಎಸ್‌ ವಿರುದ್ಧವಾಗಿ ನಾರಾಯಣಗೌಡ, ಅಶೋಕ್ ಜಯರಾಂ ಸಿಡಿದೆದ್ದು ಬಂದಿದ್ದಾರೆ. ನಾವು ಸಹ ಜೆಡಿಎಸ್ ವಿರುದ್ಧ ಚುನಾವಣೆ ಮಾಡಿಕೊಂಡು ಬಂದಿದ್ದೇವೆ. ಸದ್ಯ ಮಂಡ್ಯ ಎಂಪಿ ಸಹ ಬಿಜೆಪಿ‌ ಬೆಂಬಲಿತರು ಎಂದು ಮಂಡ್ಯದಲ್ಲಿ ಸುಮಲತಾ(Sumalatha) ಆಪ್ತ ಇಂಡುವಾಳು ಸಚ್ಚಿದಾನಂದ(Induvalu Satchidananda) ಹೇಳಿದ್ದಾರೆ. ಕಳೆದ ಎಂಎಲ್‌ಎ ಚುನಾವಣೆಯಲ್ಲಿ‌ ಬಿಜೆಪಿ ಪರ ಸುಮಲತಾ ಅವರು ಕೆಲಸ‌ ಮಾಡಿದ್ದಾರೆ. ಸುಮಲತಾ ಅವರು ಈ ಬಗ್ಗೆ ಏನು ಹೇಳ್ತಾರೆ ಗೊತ್ತಿಲ್ಲ. ನಾವು ಕೆಲ ತಿಂಗಳ ಹಿಂದೆ ಅಷ್ಟೇ ಚುನಾವಣೆ ಮುಗಿಸಿದ್ದೇವೆ. ಇಡೀ ದೇಶವೇ ಭಾರತವನ್ನು ತಿರುಗಿ ನೋಡ್ತಾ ಇದೆ. ಇದಕ್ಕೆ ಕಾರಣ ಮೋದಿ , ಬಿಜೆಪಿ ಪಕ್ಷದ ನಾಯಕತ್ವ. ಪಕ್ಷ ಮಾಡುವ ತೀರ್ಮಾನಕ್ಕೆ ನಾವು ಬದ್ಧ. ಮೈತಿ ಅನ್ನೋದು ನಮಗೆ ಅಧಿಕೃತ ಆಗಿಲ್ಲ. ಈ ರೀತಿ ತೀರ್ಮಾನ ಆದ್ರೆ ನಮ್ಮನ್ನ ಕರೆದು ಮಾತಾಡುತ್ತಾರೆ. ಮುಖ್ಯವಾಗಿ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ ಎಂದು ಅವರು ಹೇಳಿದರು.

ದೇಶ ಕಟ್ಟಲು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ. ಆಲೋಚನೆ ಮಾಡಿ ಪಕ್ಷದ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾರ್ಯಕರ್ತರ ಭಾವನೆಗೆ ಧಕ್ಕೆ ತರದ ರೀತಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಲು ಒಳ್ಳೆಯ ನಿರ್ಧಾರವಾಗುತ್ತೆ. ಸುಮಲತಾ ಅವರು ಈಗ ಮಂಡ್ಯ ಎಂಪಿ. ನಾನು ಸುಮಲತಾ ಅವರ ಬೆಂಬಲಿಗನೂ‌ ಹೌದು, ಆಪ್ತನೂ ಹೌದು. ಈಗ ನಾನು ಪಕ್ಷದ ಚೌಟ್ಟಿನಲ್ಲಿ ಇದ್ದೀನಿ. ಬಿಜೆಪಿ ಏನು ತೀರ್ಮಾನ ಮಾಡುತ್ತೆ ಅದಕ್ಕೆ ನಾನು ಬದ್ಧ. ನಾನು ಬಿಜೆಪಿಯ ಕಾರ್ಯಕರ್ತ ಬಿಜೆಪಿ ಸಿದ್ದಾಂತಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಕುಮಾರಸ್ವಾಮಿ ಮಾತು

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more