Karnataka Politics: ಜಗದೀಶ್ ಶೆಟ್ಟರ್‌ಗೆ ಹೈಕಮಾಂಡ್ ಬುಲಾವ್, ರಾಜ್ಯ ಬಿಜೆಪಿಯಲ್ಲಿ ಸಂಚಲನ

Nov 12, 2021, 8:14 PM IST

ಬೆಂಗಳೂರು, (ನ.12): ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿರುವ ಬಿಟ್ ಕಾಯಿನ್ ಪ್ರಕರಣ ಬಿಜೆಪಿಯಲ್ಲಿ ನಡುಕ ಹುಟ್ಟಿಸಿದೆ. ಹಗರಣದಲ್ಲಿರುವವರ ಹೆಸರುಗಳನ್ನ ಬಹಿರಂಗಗೊಳಿಸಿ ಎಂದು ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದಾರೆ.

ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಟ್ ಕಾಯಿನ್: ಸಿಎಂ ಬೊಮ್ಮಾಯಿಗೆ ಪ್ರಿಯಾಂಕ್ 5 ಪ್ರಶ್ನೆ

ಒಂದು ವೇಳೆ ಪಕ್ಷಕ್ಕೆ ಹಾನಿ ಉಂಟು ಮಾಡುವ ಸಾಧ್ಯತೆ ಕಂಡುಬಂದರೆ ಬಸವರಾಜ ಬೊಮ್ಮಾಯಿ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿದ್ದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.