Jagadish Shettar: ಕೈಗೆ ಶೆಟ್ಟರ್ ಶಾಕ್.. ಕನ್ಫರ್ಮ್ ಆಯ್ತಾ ಬೆಳಗಾವಿ ಲೋಕಸಭೆ ಟಿಕೆಟ್..?

Jagadish Shettar: ಕೈಗೆ ಶೆಟ್ಟರ್ ಶಾಕ್.. ಕನ್ಫರ್ಮ್ ಆಯ್ತಾ ಬೆಳಗಾವಿ ಲೋಕಸಭೆ ಟಿಕೆಟ್..?

Published : Jan 26, 2024, 04:50 PM IST

ಸ್ವಾಭಿಮಾನಕ್ಕೆ ಧಕ್ಕೆಯಾಗಿ ಬಿಜೆಪಿ ತೊರೆದಿದ್ದ ಶೆಟ್ಟರ್ ಮರಳಿ ಗೂಡಿಗೆ..!
9 ತಿಂಗಳಲ್ಲಿ ಬದಲಾಯ್ತು ವರಸೆ.. ದೆಹಲಿಯಲ್ಲಿ ಕಮಲ ಹಿಡಿದ ಶೆಟ್ಟರ್..!
ಅಮಿತ್ ಶಾ ಭೇಟಿ..20 ನಿಮಿಷಗಳ ಮಾತುಕತೆ..ಬಿಜೆಪಿಗೆ ಶೆಟ್ಟರ್ ವಾಪಸ್..!

284 ದಿನಗಳ ಹಿಂದೆ ಬಿಜೆಪಿ ವಿರುದ್ಧ ಭುಸುಗುಟ್ಟಿ ಕಾಂಗ್ರೆಸ್(Congress) ಸೇರಿದ್ದ ಶೆಟ್ಟರ್. ಬಿಜೆಪಿಯಲ್ಲಿ ಅವಮಾನವಾಯ್ತು, ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಅಂತ ಅಬ್ಬರಿಸಿ ಕೈ ಪಾಳೆಯಕ್ಕೆ ಲಾಂಗ್ ಜಂಪ್ ಮಾಡಿದ್ರು. ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಪಕ್ಷಾಂತರಕ್ಕೆ ವರ್ಷ ತುಂಬುವ ಮೊದಲೇ ಶೆಟ್ಟರ್(Jagadish Shettar) ಮತ್ತೆ ಸುನಾಮಿ ಎಬ್ಬಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾದ 284 ದಿನಗಳ ನಂತರ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ(BS Yediyurappa) ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ(B.Y. Vijayendra) ಜೊತೆ, ದೆಹಲಿಯಲ್ಲಿ ಬಿಜೆಪಿ(BJP) ವರಿಷ್ಠರನ್ನು ಭೇಟಿಯಾದ ಶೆಟ್ಟರ್, ಮತ್ತೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಾಜಕೀಯದಲ್ಲಿ ಏನು ಬೇಕಾದ್ರೂ ಆಗ್ಬಹ್ದು ಅನ್ನೋದಕ್ಕೆ ಇದು ಮತ್ತೊಂದು ಉದಾಹರಣೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ಸಂದರ್ಭ. ಬಿಜೆಪಿ ಟಿಕೆಟ್ ಕೊಡ್ಲಿಲ್ಲ ಅನ್ನೋ ಒಂದೇ ಒಂದು ಕಾರಣಕ್ಕಾಗಿ, ಕೇಸರಿ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದವರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್. ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ, ಹೀಗಾಗಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದೇನೆ ಅಂದಿದ್ರು ಶೆಟ್ಟರ್. ಇದೀಗ ಅದೇ ಶೆಟ್ಟರ್, ಕಾಂಗ್ರೆಸ್‌ಗೆ ಕೈ ಕೊಟ್ಟು ಮರಳಿ ಗೂಡು ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಕಾಂಗ್ರೆಸ್'ನ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮತ್ತೆ ಬಿಜೆಪಿಗೆ ಜೈ ಅಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಂಡಾಯದ ಬಾವುಟ ಬೀಸಿದ ದಂಡನಾಯಕರು! ಅಂತರ್ಯುದ್ಧಕ್ಕೆ ಛಿದ್ರವಾಗುತ್ತಾ ಘಟಬಂಧನ್..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more