'ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಶತಸಿದ್ಧ..' ಎಂದ ಜೈನ ಮಹಾಮುನಿ

'ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಶತಸಿದ್ಧ..' ಎಂದ ಜೈನ ಮಹಾಮುನಿ

Published : Jan 23, 2025, 07:16 PM IST

ಮುಖ್ಯಮಂತ್ರಿ ಪಟ್ಟದ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್‌ಗೆ ಸನ್ಯಾಸಿಗಳ ಬೆಂಬಲ ದೊರೆತಿದೆ. ಹೈಕಮಾಂಡ್‌ನ ನಿರ್ಧಾರವೇ ಅಂತಿಮವಾಗಿದ್ದು, ಡಿಕೆಶಿಗೆ ಸಿಂಹಾಸನ ಒಲಿಯುವುದೇ ಎಂಬ ಕುತೂಹಲ ಮನೆ ಮಾಡಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಆಗಬೇಕು ಎಂದು ಪಣ ತೊಟ್ಟಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಭಾರೀ ಅಡ್ಡಗಾಲು ಎದುರಾಗುತ್ತಿವೆ. ಪಟ್ಟದಾಸೆಗೆ ಸನ್ಯಾಸಿ ಶಕ್ತಿ. ಇದು ಡಿಕೆ ಶಿವಕುಮಾರ್ ಅವ್ರಿಗೆ ಸಿಕ್ಕಿರೋ ಮಹಾಮುನಿ ಶಕ್ತಿ, ಸಂತಬಲ.. ತುಂಬಿದ ವೇದಿಕೆಯಲ್ಲೇ ಡಿಕೆಶಿ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದರು ಆ ದಿಗಂಬರ ಮುನಿ..

ಯೆತ್ತಿ ಆಶೀರ್ವದಿಸಿದ ಜೈನಮುನಿಗಳು. ಶಿವ ಶಕ್ತಿಯ ನಂತರ ಡಿಕೆಗೆ ಸಂತ ಶಕ್ತಿ. ಬಂಡೆ ಸುತ್ತ ರಾಜಕೀಯ ಚಕ್ರವ್ಯೂಹ, ಬಂಡೆಗೆ ಧರ್ಮಗುರುಗಳ ಅಭಯ. ಹಾಗಾದರೆ ಡಿ.ಕೆ. ಶಿವಕುಮಾರ್ ಅವರಿಗೆ ಸಿಕ್ಕಿರೋ ಈ ಸನ್ಯಾಸಿ ಶಕ್ತಿ ಅವರನ್ನು ರಾಜಪಟ್ಟದ ಮೇಲೆ ಕೂರಿಸುತ್ತಾ.? ಬಂಡೆ ಆರಂಭಿಸಿರೋ ಸಿಂಹಾಸನ ಯಜ್ಞಕ್ಕೆ ಹೈಕಮಾಂಡ್ ವರ ಸಿಗುತ್ತಾ.? ಹಾಗೂ ಇತಿಹಾಸದ ಆ ಎರಡು ಘಟನೆಗಳು ಮರುಕಳಿಸುತ್ತದೆ ಎಂದು ಡಿ.ಕೆ. ಶಿವಕುಮಾರ್ ದೃಢವಾಗಿ ನಂಬಿರೋದು ಯಾಕೆ? ಹಾಗೂ ಆ ಇತಿಹಾಸವೇನು ಎಂಬ ಅಸಲಿ ಸತ್ಯಾಂಶ ಇಲ್ಲಿದೆ ನೋಡಿ..

ಕಾಂಗ್ರೆಸ್‌ನಲ್ಲಿ ಶುರುವಾಗಿರೋದು ಪಟ್ಟದ ಆಟ. ಆ ಆಟದಲ್ಲಿ ಒಬ್ಬೊಬ್ಬರದ್ದು ಒಂದೊಂದು ದಾಳ. ಸಿಂಹಾಸನಕ್ಕಾಗಿ ಹೈಕಮಾಂಡ್ ಮೇಲೆ ನಂಬಿಕೆ ಇಟ್ಟಿರೋ ಡಿಕೆ ಶಿವಕುಮಾರ್ ಅವರ ಬೆನ್ನಿಗೆ ಸನ್ಯಾಸಿ ಶಕ್ತಿಯೇ ನಿಂತಿದೆ. ಈ ಶಕ್ತಿಯಿಂದ ರಾಜಕೀಯ ಲೆಕ್ಕಾಚಾರಗಳೇನೂ ಬದಲಾಗಲು ಸಾಧ್ಯವಿಲ್ಲ. ಈ ಲೆಕ್ಕಾಚಾರಗಳೆಲ್ಲಾ ಅಡಗಿರೋದು ಹೈಕಮಾಂಡ್ ಕೈಯಲ್ಲಿ. ಹಾಗಾದರೆ ಡಿಕೆಶಿ ಅವ್ರಿಗೆ ಹೈಕಮಾಂಡ್ ಕೃಪೆ ತೋರುತ್ತಾ ಎಂಬುದು ಭಾರೀ ಕುತೂಹಲ ಮೂಡಿಸಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more