ಲೋಕಸಭೆಗೆ ಜೆಡಿಎಸ್-ಬಿಜೆಪಿ ಮೈತ್ರಿಯಾದರೆ, ಮಂಡ್ಯ ಸಂಸದೆ ಸುಮಲತಾ ಕಥೆ ಏನು?

ಲೋಕಸಭೆಗೆ ಜೆಡಿಎಸ್-ಬಿಜೆಪಿ ಮೈತ್ರಿಯಾದರೆ, ಮಂಡ್ಯ ಸಂಸದೆ ಸುಮಲತಾ ಕಥೆ ಏನು?

Published : Jul 13, 2023, 11:10 PM IST

ಲೋಕಸಭಾ ಚುನಾವಣೆಗೆ ಬಿಜೆಪಿ- ಜೆಡಿಎಸ್‌f ಮೈತ್ರಿ ಮಾಡಿಕೊಂಡು ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ, ಬಿಜೆಪಿಗೆ ಬೆಂಬಲ ನೀಡಿರುವ ಸಂಸದೆ ಸುಮಲತಾ ಅಂಬರೀಶ್‌ ಕಥೆ ಏನಾಗಲಿದೆ ಎಂಬ ಅನುಮಾನ ಕಾಡುತ್ತಿದೆ.

ಬೆಂಗಳೂರು (ಜು.13): ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳು ಬರಬಾರದು ಎಂಬ ದೃಷ್ಟಿಕೋನದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಲೋಕಸಭಾ ಚುನಾವಣೆಗೂ ಮುನ್ನವೇ ಮೈತ್ರಿಯನ್ನು ಮಾಡಿಕೊಳ್ಳಲು ಮುಂದಾಗಿವೆ. ಒಂದು ವೇಳೆ ಮೈತ್ರಿ ಮಾಡಿಕೊಂಡು ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ, ಬಿಜೆಪಿಗೆ ಬೆಂಬಲ ನೀಡಿರುವ ಸಂಸದೆ ಸುಮಲತಾ ಅಂಬರೀಶ್‌ ಕಥೆ ಏನಾಗಲಿದೆ ಎಂಬ ಅನುಮಾನ ಕಾಡುತ್ತಿದೆ.

ಇನ್ನು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಲೋಕಸಭಾ ಸಂಸತ್‌ ಭವನದ ಉದ್ಘಾಟನೆಗೆ ಕೇಂದ್ರ ಸರ್ಕಾರದ ವಿರೋಧ ಪಕ್ಷಗಳ ಸೂಚನೆಯನ್ನು ಮೀರಿ ಭಾಗವಹಿಸಿದ್ದರು. ಆದರೆ, ಈ ವೇಳೆ ದೇವೇಗೌಡರು ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚೆ ಮಾಡಿದ್ದರು. ಇನ್ನು ಮಂಡ್ಯದಲ್ಲಿ ಬಿಜೆಪಿ ಕೂಡ ಹೆಚ್ಚಿನ ಮತಗಳನ್ನು ಪಡೆದುಕೊಂಡಿದೆ. ಒಂದು ವೇಳೆ ಜೆಡಿಎಸ್‌ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಲ್ಲಿ ಲೋಕಸಭಾ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗುತ್ತದೆ. ಆದರೆ, ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದು ಸಂಸದೆಯಾಗಿರುವ ಹಾಗೂ ಬಿಜೆಪಿಗೆ ಬೆಂಬಲ ನೀಡಿರುವ ಸುಮಲತಾ ಅಂಬರೀಶ್‌ ಅವರ ಕಥೆ ಏನಾಗಲಿದೆ ಎಂಬುದು ಕಾದು ನೊಡಬೇಕಿದೆ. 

ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಎಲ್ಲಿಯೂ ಒಳಮೈತ್ರಿ ಮಾಡಿಕೊಳ್ಳಬೇಡಿ ಎಂದು ಬಿಜೆಪಿಯ ಚಾಣಕ್ಯ ಅಮಿತ್‌ ಶಾ ಅವರು ಖಡಕ್‌ ಸೂಚನೆಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಭವಿಷ್ಯದಲ್ಲಿ ಸಂಘಟನೆ ಮಾಡಬಹುದು ಎಂಬ ದೃಷ್ಟಿಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್‌ಗೆ ಭಾರಿ ಹಿನ್ನಡೆ ಉಂಟಾಗಿದ್ದು, ಕಡಿಮೆ ಸ್ಥಾನಗಳನ್ನು ಪಡೆದಿದೆ. ಆದರೆ, ಮಂಡ್ಯ, ಹಾಸನ ಮತ್ತು ಮೈಸೂರು ಸೇರಿದಂತೆ ದಕ್ಷಿಣದ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಕೆಲವು ಮತಗಳನ್ನು ಪಡೆಯುವಲ್ಲಿ ಸಫಲವಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more