ಲೋಕಸಭೆಗೆ ಜೆಡಿಎಸ್-ಬಿಜೆಪಿ ಮೈತ್ರಿಯಾದರೆ, ಮಂಡ್ಯ ಸಂಸದೆ ಸುಮಲತಾ ಕಥೆ ಏನು?

ಲೋಕಸಭೆಗೆ ಜೆಡಿಎಸ್-ಬಿಜೆಪಿ ಮೈತ್ರಿಯಾದರೆ, ಮಂಡ್ಯ ಸಂಸದೆ ಸುಮಲತಾ ಕಥೆ ಏನು?

Published : Jul 13, 2023, 11:10 PM IST

ಲೋಕಸಭಾ ಚುನಾವಣೆಗೆ ಬಿಜೆಪಿ- ಜೆಡಿಎಸ್‌f ಮೈತ್ರಿ ಮಾಡಿಕೊಂಡು ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ, ಬಿಜೆಪಿಗೆ ಬೆಂಬಲ ನೀಡಿರುವ ಸಂಸದೆ ಸುಮಲತಾ ಅಂಬರೀಶ್‌ ಕಥೆ ಏನಾಗಲಿದೆ ಎಂಬ ಅನುಮಾನ ಕಾಡುತ್ತಿದೆ.

ಬೆಂಗಳೂರು (ಜು.13): ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳು ಬರಬಾರದು ಎಂಬ ದೃಷ್ಟಿಕೋನದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಲೋಕಸಭಾ ಚುನಾವಣೆಗೂ ಮುನ್ನವೇ ಮೈತ್ರಿಯನ್ನು ಮಾಡಿಕೊಳ್ಳಲು ಮುಂದಾಗಿವೆ. ಒಂದು ವೇಳೆ ಮೈತ್ರಿ ಮಾಡಿಕೊಂಡು ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ, ಬಿಜೆಪಿಗೆ ಬೆಂಬಲ ನೀಡಿರುವ ಸಂಸದೆ ಸುಮಲತಾ ಅಂಬರೀಶ್‌ ಕಥೆ ಏನಾಗಲಿದೆ ಎಂಬ ಅನುಮಾನ ಕಾಡುತ್ತಿದೆ.

ಇನ್ನು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಲೋಕಸಭಾ ಸಂಸತ್‌ ಭವನದ ಉದ್ಘಾಟನೆಗೆ ಕೇಂದ್ರ ಸರ್ಕಾರದ ವಿರೋಧ ಪಕ್ಷಗಳ ಸೂಚನೆಯನ್ನು ಮೀರಿ ಭಾಗವಹಿಸಿದ್ದರು. ಆದರೆ, ಈ ವೇಳೆ ದೇವೇಗೌಡರು ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚೆ ಮಾಡಿದ್ದರು. ಇನ್ನು ಮಂಡ್ಯದಲ್ಲಿ ಬಿಜೆಪಿ ಕೂಡ ಹೆಚ್ಚಿನ ಮತಗಳನ್ನು ಪಡೆದುಕೊಂಡಿದೆ. ಒಂದು ವೇಳೆ ಜೆಡಿಎಸ್‌ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಲ್ಲಿ ಲೋಕಸಭಾ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗುತ್ತದೆ. ಆದರೆ, ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದು ಸಂಸದೆಯಾಗಿರುವ ಹಾಗೂ ಬಿಜೆಪಿಗೆ ಬೆಂಬಲ ನೀಡಿರುವ ಸುಮಲತಾ ಅಂಬರೀಶ್‌ ಅವರ ಕಥೆ ಏನಾಗಲಿದೆ ಎಂಬುದು ಕಾದು ನೊಡಬೇಕಿದೆ. 

ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಎಲ್ಲಿಯೂ ಒಳಮೈತ್ರಿ ಮಾಡಿಕೊಳ್ಳಬೇಡಿ ಎಂದು ಬಿಜೆಪಿಯ ಚಾಣಕ್ಯ ಅಮಿತ್‌ ಶಾ ಅವರು ಖಡಕ್‌ ಸೂಚನೆಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಭವಿಷ್ಯದಲ್ಲಿ ಸಂಘಟನೆ ಮಾಡಬಹುದು ಎಂಬ ದೃಷ್ಟಿಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್‌ಗೆ ಭಾರಿ ಹಿನ್ನಡೆ ಉಂಟಾಗಿದ್ದು, ಕಡಿಮೆ ಸ್ಥಾನಗಳನ್ನು ಪಡೆದಿದೆ. ಆದರೆ, ಮಂಡ್ಯ, ಹಾಸನ ಮತ್ತು ಮೈಸೂರು ಸೇರಿದಂತೆ ದಕ್ಷಿಣದ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಕೆಲವು ಮತಗಳನ್ನು ಪಡೆಯುವಲ್ಲಿ ಸಫಲವಾಗಿದೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more