ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಜೆಡಿಎಸ್‌ ಮೈತ್ರಿಗೆ ಒಲವು: ನಡ್ಡಾ ಭೇಟಿಯಾದ ದೊಡ್ಡಗೌಡ್ರು

ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಜೆಡಿಎಸ್‌ ಮೈತ್ರಿಗೆ ಒಲವು: ನಡ್ಡಾ ಭೇಟಿಯಾದ ದೊಡ್ಡಗೌಡ್ರು

Published : Jun 06, 2023, 10:23 PM IST

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಜೆಡಿಎಸ್‌ ಹಾಗೂ ಬಿಜೆಪಿ ಲೋಕಸಭಾ ಚುನಾವಣೆಗೂ ಮುನ್ನವೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತಿದೆ.

ಬೆಂಗಳೂರು (ಜೂ.06): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಭಲ ಪ್ರಾದೇಶಿಕ ಪಕ್ಷವಾಗಿದ್ದ ಜೆಡಿಎಸ್‌ ಈಗ ಸಂಪೂರ್ಣ ನೆಲಕಚ್ಚಿ ಹೋಗಿದೆ. ಪ್ರತಿಬಾರಿ 25 ರಿಂದ 30ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುತ್ತಿದ್ದ ಜೆಡಿಎಸ್‌ 2023ರ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಮೇಲೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಣ್ಣಿಟ್ಟಿದ್ದಾರೆ. ಹೀಗಾಗಿ, ಎನ್‌ಡಿಎ ಮೈತ್ರಿಕೂಟ ಸೇರಲು ಜೆಡಿಎಸ್‌ ಒಲವು ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪಾರ್ಲಿಮೆಂಟ್‌ ಉದ್ಘಾಟನೆ ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್‌ ನಡ್ಡಾ ಭೇಟಿ ಮಾಡಿದ್ದ ದೇವೇಗೌಡರು, ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆಂಬ ಸುಳಿವು ಸಿಕ್ಕಿದೆ. ಇನ್ನು ರಾಜ್ಯದ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳಿಗೆ ಬಿಜೆಪಿ ಬೆಂಬಲವನ್ನೂ ಕೇಳಿದ್ದಾರೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more