Jul 5, 2020, 9:56 PM IST
ಬೆಂಗಳೂರು, (ಜುಲೈ.05): ಕೊರೋನಾ ವೈರಸ್ ಎಂಬ ಹೆಸರು ಕೇಳಿದರೆ ಸಾಕು ಕನ್ನಡಿಗರು ನಿದ್ದೆಯಲ್ಲೂ ಬೆಚ್ಚಿ ಬೀಳುವಂತಾ ವಾತಾವರಣ ಸೃಷ್ಟಿಯಾಗುತ್ತಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್ಡೌನ್ ಮಾಡಬೇಕೆಂಬ ಕೂಗು ಕೇಳಿಬರುತ್ತಿದೆ. ಇದಕ್ಕೆ ಮಾಜಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ. ಎ. ಶರವಣ ಅವರು ಧ್ವನಿಗೂಡಿಸಿದ್ದು, ವಿಡಿಯೋ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪಗೆ ವಿಶೇಷ ಮನವಿ ಮಾಡಿದ್ದಾರೆ.