ಎನ್.ಡಿ.ಎ. ಮೈತ್ರಿಕೂಟ ಸೇರಿದ ಜೆಡಿಎಸ್.. ರಾಜ್ಯದಲ್ಲಿ ಹೊಸ ಆಟ ಶುರು..!

ಎನ್.ಡಿ.ಎ. ಮೈತ್ರಿಕೂಟ ಸೇರಿದ ಜೆಡಿಎಸ್.. ರಾಜ್ಯದಲ್ಲಿ ಹೊಸ ಆಟ ಶುರು..!

Published : Sep 23, 2023, 12:31 PM IST

ಲೋಕಯುದ್ಧಕ್ಕೆ ಮಹಾ ಮೈತ್ರಿ ಫಿಕ್ಸ್..ಹೊಸ ಆಟವೂ ಫಿಕ್ಸ್..!
ಕಮಲ ಮುಡಿದ ತೆನೆ ಹೊತ್ತ ಮಹಿಳೆ..!ಯಾರಿಗೆಷ್ಟು ಸೀಟು..?
40 ನಿಮಿಷಗಳ ಸೀಕ್ರೆಟ್ ಸಭೆಯಲ್ಲಿ ಚರ್ಚೆಯಾಗಿದ್ದೇನು..?
 

20ರ ಟಾರ್ಗೆಟ್ ಫಿಕ್ಸ್ ಮಾಡಿ ಮುನ್ನುಗ್ತಾ ಇರೋ ಕಾಂಗ್ರೆಸ್‌ನ(Congress) ಅಶ್ವಮೇಧದ ಕುದುರೆಯನ್ನು ಕಟ್ಟಿ ಹಾಕಲು ಫಿಕ್ಸ್ ಆಗಿದೆ ಬಿಜೆಪಿ-ಜೆಡಿಎಸ್ (JDS) ಮೈತ್ರಿ. ಇದು ಶತ್ರುವಿನ ಶತ್ರು ಮಿತ್ರ ಅನ್ನೋ ಸೂತ್ರದಡಿ ಹೆಣೆಯಲಾಗಿರೋ ರೋಚಕ ಮೈತ್ರಿ ರಣವ್ಯೂಹ. 2006ರ ನಂತರ ಮತ್ತೆ ಬಿಜೆಪಿ(BJP) ಜೊತೆ ದೋಸ್ತಿ ಮಾಡ್ಕೊಂಡಿರೋ ದಳಪತಿಗಳು ಲೋಕಸಭಾ ಚುನಾವಣೆಯನ್ನು(Lokdabha) ಮೈತ್ರಿಕೂಟದೊಂದಿಗೆ ಎದುರಿಸಲು ರೆಡಿಯಾಗಿದ್ದಾರೆ. ದೆಹಲಿಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ನಡೆದಿದ್ದು, ದಳಪತಿಗಳು ಅಧಿಕೃತವಾಗಿ ಎನ್.ಡಿ.ಎ ಮೈತ್ರಿಕೂಟ ಸೇರಿದ್ದಾರೆ. ಲೋಕಸಭಾ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಎದುರಿಸಲಿವೆ ಅನ್ನೋ ಸುದ್ದಿಯನ್ನು ಎಲ್ಲರಿಗಿಂತ ಮೊದ್ಲು ಬ್ರೇಕ್ ಮಾಡಿದ್ದು ರಾಜ್ಯದ ಪೊಲಿಟಿಕಲ್ ಹೆಡ್ ಕ್ವಾರ್ಟರ್ ಖ್ಯಾತಿಯ ನಿಮ್ಮ ನೆಚ್ಚಿನ ಏಷ್ಯಾನೆಟ್ ಸುವರ್ಣ ನ್ಯೂಸ್. ಆ ಸುದ್ದಿ ಈಗ ನಿಜವಾಗಿದೆ. ಮೈತ್ರಿ ಮಾತುಕತೆಯಾಗಿ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ದಳಪತಿ ಕುಮಾರಸ್ವಾಮಿ, ಶುಕ್ರವಾರ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಇನ್ನು ಬಿಜೆಪಿ-ಜೆಡಿಎಸ್ ಮಹಾಮೈತ್ರಿಯ(Alliance) ಬಗ್ಗೆ ಟ್ವೀಟ್ ಮಾಡಿರೋ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಜೆಡಿಎಸ್ಸನ್ನು ಎನ್.ಡಿ.ಎ ಮೈತ್ರಿಕೂಟಕ್ಕೆ ಸ್ವಾಗತಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಉಂಡ ಮನೆಗೆ ಕನ್ನ ಬಗೆದ ಕಿರಾತಕರು..! 30 ಸಾವಿರ ಹಣಕ್ಕಾಗಿ ಧಣಿಯನ್ನೇ ಕೊಂದ ಪಾಪಿಗಳು !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more