ಒಂದೇ ಪಕ್ಷದಲ್ಲಿದ್ದೀರಿ... ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅನರ್ಹತೆ ಬಗ್ಗೆ ಎ.ಮಂಜು ಮಾತು!

ಒಂದೇ ಪಕ್ಷದಲ್ಲಿದ್ದೀರಿ... ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅನರ್ಹತೆ ಬಗ್ಗೆ ಎ.ಮಂಜು ಮಾತು!

Published : Sep 01, 2023, 09:03 PM IST

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿರುವ ವಿಚಾರವಾಗಿ ಜೆಡಿಎಸ್ ಶಾಸಕ, ದೂರುದಾರರೂ ಆಗಿರುವ ಎ.ಮಂಜು ಪ್ರತಿಕ್ರಿಯಿಸಿದ್ದು, ನಮ್ಮ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಹೇಳಿದ್ದಾರೆ. 
 

ಬೆಂಗಳೂರು (ಸೆ.01): ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿರುವ ವಿಚಾರವಾಗಿ ಜೆಡಿಎಸ್ ಶಾಸಕ, ದೂರುದಾರರೂ ಆಗಿರುವ ಎ.ಮಂಜು ಪ್ರತಿಕ್ರಿಯಿಸಿದ್ದು, ನಮ್ಮ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಹೇಳಿದ್ದಾರೆ. ಹೈಕೋರ್ಟ್​ ತೀರ್ಪನ್ನು ಸ್ವಾಗತಿಸುವೆ, ಖುಷಿ ಸಿಕ್ಕಿದೆ. ಸುಳ್ಳು ಮಾಹಿತಿ ನೀಡಿದ್ದರಿಂದ ಹೈಕೋರ್ಟ್ ಅವರನ್ನು ಅನರ್ಹಗೊಳಿಸಿದೆ ಎಂದು ಮಂಜು ತಿಳಿಸಿದ್ದಾರೆ. ಅವರು ಸರಿಯಿದ್ದೇವೆ ಅನ್ನುವುದಾದರೆ ಕಾನೂನು ಹೋರಾಟ ಮಾಡಲಿ. ಸುಪ್ರೀಂ ಕೋರ್ಟ್​ನಲ್ಲಿ ಕಾನೂನು ಹೋರಾಟಮಾಡಿ ಸಮರ್ಥಿಸಿಕೊಳ್ಳಲಿ. ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದರೆ ಶಿಕ್ಷೆ ಅನುಭವಿಸಲಿ. ಯಾರೇ ಆದರೂ ಸರಿ, ಚುನಾವಣಾ ಆಯೋಗಕ್ಕೆ ಸರಿಯಾದ ಮಾಹಿತಿ ನೀಡಬೇಕು. ಬದಲಾದ ಸನ್ನಿವೇಶದಲ್ಲಿ ನಾನು ಜೆಡಿಎಸ್​ ಶಾಸಕನಾಗಿದ್ದೇನೆ. ಹಾಗೆಂದು ಜೆಡಿಎಸ್ ಸೇರುವಾಗ ಯಾವುದೇ ಷರತ್ತು ವಿಧಿಸಿರಲಿಲ್ಲ. ಪ್ರಜ್ವಲ್ ವಿರುದ್ಧ ಕೇಸ್ ದಾಖಲಿಸಿದ್ದ ವಿಚಾರವಾಗಿ ಅಂದೇ ಮಾಹಿತಿ ನೀಡಿದ್ದೆ. ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಮಾತುಕತೆ ವೇಳೆಯೂ ಹೇಳಿದ್ದೆ ಎಂದರು.

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more