'ಕನ್ನಡ ಪಂಡಿತರು ಅಂದ್ಕೊಂಡಿದ್ದೆ, ಸಿದ್ಧರಾಮಯ್ಯರಿಗೆ ಕನ್ನಡ ಬರಲ್ವಾ?' ಎಚ್‌ಡಿಕೆ ಪ್ರಶ್ನೆ!

'ಕನ್ನಡ ಪಂಡಿತರು ಅಂದ್ಕೊಂಡಿದ್ದೆ, ಸಿದ್ಧರಾಮಯ್ಯರಿಗೆ ಕನ್ನಡ ಬರಲ್ವಾ?' ಎಚ್‌ಡಿಕೆ ಪ್ರಶ್ನೆ!

Published : Jul 17, 2023, 08:21 PM IST

ತಾವೊಬ್ಬ ಕನ್ನಡ ಪಂಡಿತ ಅನ್ನೋ ರೀತಿಯಲ್ಲಿ ಮಾತನಾಡುವ ಸಿಎಂ ಸಿದ್ಧರಾಮಯ್ಯಗೆ ಕನ್ನಡ ಭಾಷೆ ಅರ್ಥವಾಗೋದಿಲ್ವಾ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರು (ಜು.17): ಪಂಚರತ್ನ ಜಾರಿಯಾಗದೇ ಇದ್ದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆ ಮಾಡ್ತೇನೆ ಅಂದಿದ್ದೆ. 123 ಸೀಟು ಬರದೇ ಇದ್ದಲ್ಲಿ ವಿಸರ್ಜನೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿರಲಿಲ್ಲ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ತನ್ನನ್ನು ತಾನು ಕನ್ನಡ ಪಂಡಿತ ಅಂತಾ ಸಿದ್ಧರಾಮಯ್ಯ ಹೇಳ್ತಾರೆ. ಅವರಿಗೇನು ಕನ್ನಡ ಬರೋದಿಲ್ವಾ? ಎಂದು ಸಿದ್ಧರಾಮಯ್ಯ ವಿರುದ್ಧ ಎಚ್‌ಡಿಕೆ ಲೇವಡಿ ಮಾಡಿದ್ದಾರೆ. ದೇವರಾಜು ಅರಸು ನಂತ್ರ 2ನೇ ಬಾರಿಗೆ ಸಿಎಂ ಆಗಿದ್ದೀರಿ ಅಂತಾ ಹೇಳ್ಕೊಂಡು ತಿರುಗಾಡ್ತಾ ಇದ್ದೀರಿ, ಇದರಿಂದ ಜನರಿಗೆ ಏನ್‌ ಸಂದೇಶ ಕೊಡೋಕೆ ಹೊರಟಿದ್ದೀರಿ ಅದನ್ನು ಹೇಳಿ ಎಂದು ಎಚ್‌ಡಿಕೆ ಹೇಳಿದ್ದಾರೆ.

'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

ಇದು ನನ್ನ ಕೊನೆ ಚುನಾವಣೆ ಅಂತಾ ಹೇಳಿದ್ದೀರಿ. ಜನರ ಬಳಿ ಒಳ್ಳೆಯ ಹೆಸರು ತೆಗೆದುಕೊಂಡು ಅಧಿಕಾರ ಮಾಡಿ. ಯಾವ ಸರ್ಕಾರದ ಮೇಲೂ ಈ ರೀತಿಯ ಆರೋಪಗಳನ್ನು ನಾನೆಲ್ಲೂ ಕೇಳಿರಲಿಲ್ಲ ಎಂದು ಎಚ್‌ಡಿಕೆ ಹೇಳಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more