Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

Published : Apr 11, 2023, 01:52 PM IST

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ವಂಚಿತವಾಗಿ ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾಗಿದ್ದ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಟಿಕೆಟ್‌ ನೀಡಲು ಮುಂದಾಗಿದೆ.

ಬೆಳಗಾವಿ (ಏ.11): ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಕೆಲವೇ ಮತಗಳ ಸಂತರದಿಂದ ಸೋತಿದ್ದ ಆನಂದ ಚೋಪ್ರಾ ಅವರ ಪುತ್ರ ಸೌರಭ್ ಚೋಪ್ರಾಗೆ ಕಾಂಗ್ರೆಸ್ ಟಿಕೆಟ್ ಕೊಡದೇ ನಿರಾಕರಿಸಿದೆ. ಹೀಗಾಗಿ, ನೀವೇ ನನ್ನ ಮಗನ ಕೈಯನ್ನು ಹಿಡಿಯಬೇಕು ಎಂದು ಕಾಂತಾದೇವಿ ಆನಂದ್‌ ಚೋಪ್ರಾ ಬೆಂಬಲಿಗರ‌ ಸಭೆಯಲ್ಲಿ ಕಣ್ಣೀರು ಹಾಕಿದ್ದರು. ಈಗ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ ಹಾಕಲು ಮುಂದಾಗಿದೆ.

ಸವದತ್ತಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಕಾಂತಾದೇವಿ ಛೋಪ್ರಾ ಎಮೋಷನಲ್ ಟಚ್ ನೀಡಿದ್ದಾರೆ. 2013, 2018ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ತೀವ್ರ ಪೈಪೋಟಿ ಒಡ್ಡಿದ್ದ ಆನಂದ ಚೋಪ್ರಾ, ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಆದರೆ, ಕಳೆದ‌ ಚುನಾವಣೆಯಲ್ಲಿ ಆನಂದ ಮಾಮನಿಗೆ ತೀವ್ರ ಪೈಪೋಟಿ ನೀಡಿದ್ದ ಚೋಪ್ರಾ ಅವರು ಈಗ ವಿಧಿವಶರಾಗಿದ್ದಾರೆ. ಈಗ ಅವರ ಪುತ್ರ ಸೌರಭ್‌ ಚೋಪ್ರಾ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಸೌರಬ್‌ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಸವದತ್ತಿಯಲ್ಲಿ ಬೆಂಬಲಿಗರ ಸಭೆಯನ್ನು ನಡೆಸಿದ ವೇಳೆ ತಾಯಿ ಕಾಂತಾದೇವಿ ಕಣ್ಣೀರು ಹಾಕಿದರು. ಗಂಡನನ್ನು ಕಳೆದುಕೊಂಡ ನಾನು ನಿಮಗೆ ಮಗನನ್ನು ಬಿಟ್ಟಿದ್ದೇನೆ. ನೀವೇನು ಮಾಡ್ತೀರಿ ಮಾಡಿ, ನಿಮಗೆ ಬಿಟ್ಟಿದ್ದು ಎಂದು ಮಂಡಿಯೂರಿ ಅಳಲು ತೋಡಿಕೊಂಡಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more