Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

Published : Apr 11, 2023, 01:52 PM IST

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ವಂಚಿತವಾಗಿ ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾಗಿದ್ದ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಟಿಕೆಟ್‌ ನೀಡಲು ಮುಂದಾಗಿದೆ.

ಬೆಳಗಾವಿ (ಏ.11): ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಕೆಲವೇ ಮತಗಳ ಸಂತರದಿಂದ ಸೋತಿದ್ದ ಆನಂದ ಚೋಪ್ರಾ ಅವರ ಪುತ್ರ ಸೌರಭ್ ಚೋಪ್ರಾಗೆ ಕಾಂಗ್ರೆಸ್ ಟಿಕೆಟ್ ಕೊಡದೇ ನಿರಾಕರಿಸಿದೆ. ಹೀಗಾಗಿ, ನೀವೇ ನನ್ನ ಮಗನ ಕೈಯನ್ನು ಹಿಡಿಯಬೇಕು ಎಂದು ಕಾಂತಾದೇವಿ ಆನಂದ್‌ ಚೋಪ್ರಾ ಬೆಂಬಲಿಗರ‌ ಸಭೆಯಲ್ಲಿ ಕಣ್ಣೀರು ಹಾಕಿದ್ದರು. ಈಗ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ ಹಾಕಲು ಮುಂದಾಗಿದೆ.

ಸವದತ್ತಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಕಾಂತಾದೇವಿ ಛೋಪ್ರಾ ಎಮೋಷನಲ್ ಟಚ್ ನೀಡಿದ್ದಾರೆ. 2013, 2018ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ತೀವ್ರ ಪೈಪೋಟಿ ಒಡ್ಡಿದ್ದ ಆನಂದ ಚೋಪ್ರಾ, ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಆದರೆ, ಕಳೆದ‌ ಚುನಾವಣೆಯಲ್ಲಿ ಆನಂದ ಮಾಮನಿಗೆ ತೀವ್ರ ಪೈಪೋಟಿ ನೀಡಿದ್ದ ಚೋಪ್ರಾ ಅವರು ಈಗ ವಿಧಿವಶರಾಗಿದ್ದಾರೆ. ಈಗ ಅವರ ಪುತ್ರ ಸೌರಭ್‌ ಚೋಪ್ರಾ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಸೌರಬ್‌ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಸವದತ್ತಿಯಲ್ಲಿ ಬೆಂಬಲಿಗರ ಸಭೆಯನ್ನು ನಡೆಸಿದ ವೇಳೆ ತಾಯಿ ಕಾಂತಾದೇವಿ ಕಣ್ಣೀರು ಹಾಕಿದರು. ಗಂಡನನ್ನು ಕಳೆದುಕೊಂಡ ನಾನು ನಿಮಗೆ ಮಗನನ್ನು ಬಿಟ್ಟಿದ್ದೇನೆ. ನೀವೇನು ಮಾಡ್ತೀರಿ ಮಾಡಿ, ನಿಮಗೆ ಬಿಟ್ಟಿದ್ದು ಎಂದು ಮಂಡಿಯೂರಿ ಅಳಲು ತೋಡಿಕೊಂಡಿದ್ದಾರೆ.

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more