Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

Published : Apr 11, 2023, 01:52 PM IST

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ವಂಚಿತವಾಗಿ ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾಗಿದ್ದ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಟಿಕೆಟ್‌ ನೀಡಲು ಮುಂದಾಗಿದೆ.

ಬೆಳಗಾವಿ (ಏ.11): ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಕೆಲವೇ ಮತಗಳ ಸಂತರದಿಂದ ಸೋತಿದ್ದ ಆನಂದ ಚೋಪ್ರಾ ಅವರ ಪುತ್ರ ಸೌರಭ್ ಚೋಪ್ರಾಗೆ ಕಾಂಗ್ರೆಸ್ ಟಿಕೆಟ್ ಕೊಡದೇ ನಿರಾಕರಿಸಿದೆ. ಹೀಗಾಗಿ, ನೀವೇ ನನ್ನ ಮಗನ ಕೈಯನ್ನು ಹಿಡಿಯಬೇಕು ಎಂದು ಕಾಂತಾದೇವಿ ಆನಂದ್‌ ಚೋಪ್ರಾ ಬೆಂಬಲಿಗರ‌ ಸಭೆಯಲ್ಲಿ ಕಣ್ಣೀರು ಹಾಕಿದ್ದರು. ಈಗ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ ಹಾಕಲು ಮುಂದಾಗಿದೆ.

ಸವದತ್ತಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಕಾಂತಾದೇವಿ ಛೋಪ್ರಾ ಎಮೋಷನಲ್ ಟಚ್ ನೀಡಿದ್ದಾರೆ. 2013, 2018ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ತೀವ್ರ ಪೈಪೋಟಿ ಒಡ್ಡಿದ್ದ ಆನಂದ ಚೋಪ್ರಾ, ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಆದರೆ, ಕಳೆದ‌ ಚುನಾವಣೆಯಲ್ಲಿ ಆನಂದ ಮಾಮನಿಗೆ ತೀವ್ರ ಪೈಪೋಟಿ ನೀಡಿದ್ದ ಚೋಪ್ರಾ ಅವರು ಈಗ ವಿಧಿವಶರಾಗಿದ್ದಾರೆ. ಈಗ ಅವರ ಪುತ್ರ ಸೌರಭ್‌ ಚೋಪ್ರಾ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಸೌರಬ್‌ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಸವದತ್ತಿಯಲ್ಲಿ ಬೆಂಬಲಿಗರ ಸಭೆಯನ್ನು ನಡೆಸಿದ ವೇಳೆ ತಾಯಿ ಕಾಂತಾದೇವಿ ಕಣ್ಣೀರು ಹಾಕಿದರು. ಗಂಡನನ್ನು ಕಳೆದುಕೊಂಡ ನಾನು ನಿಮಗೆ ಮಗನನ್ನು ಬಿಟ್ಟಿದ್ದೇನೆ. ನೀವೇನು ಮಾಡ್ತೀರಿ ಮಾಡಿ, ನಿಮಗೆ ಬಿಟ್ಟಿದ್ದು ಎಂದು ಮಂಡಿಯೂರಿ ಅಳಲು ತೋಡಿಕೊಂಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more