Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

Published : Apr 11, 2023, 01:52 PM IST

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ವಂಚಿತವಾಗಿ ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾಗಿದ್ದ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಟಿಕೆಟ್‌ ನೀಡಲು ಮುಂದಾಗಿದೆ.

ಬೆಳಗಾವಿ (ಏ.11): ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಕೆಲವೇ ಮತಗಳ ಸಂತರದಿಂದ ಸೋತಿದ್ದ ಆನಂದ ಚೋಪ್ರಾ ಅವರ ಪುತ್ರ ಸೌರಭ್ ಚೋಪ್ರಾಗೆ ಕಾಂಗ್ರೆಸ್ ಟಿಕೆಟ್ ಕೊಡದೇ ನಿರಾಕರಿಸಿದೆ. ಹೀಗಾಗಿ, ನೀವೇ ನನ್ನ ಮಗನ ಕೈಯನ್ನು ಹಿಡಿಯಬೇಕು ಎಂದು ಕಾಂತಾದೇವಿ ಆನಂದ್‌ ಚೋಪ್ರಾ ಬೆಂಬಲಿಗರ‌ ಸಭೆಯಲ್ಲಿ ಕಣ್ಣೀರು ಹಾಕಿದ್ದರು. ಈಗ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ ಹಾಕಲು ಮುಂದಾಗಿದೆ.

ಸವದತ್ತಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಕಾಂತಾದೇವಿ ಛೋಪ್ರಾ ಎಮೋಷನಲ್ ಟಚ್ ನೀಡಿದ್ದಾರೆ. 2013, 2018ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ತೀವ್ರ ಪೈಪೋಟಿ ಒಡ್ಡಿದ್ದ ಆನಂದ ಚೋಪ್ರಾ, ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಆದರೆ, ಕಳೆದ‌ ಚುನಾವಣೆಯಲ್ಲಿ ಆನಂದ ಮಾಮನಿಗೆ ತೀವ್ರ ಪೈಪೋಟಿ ನೀಡಿದ್ದ ಚೋಪ್ರಾ ಅವರು ಈಗ ವಿಧಿವಶರಾಗಿದ್ದಾರೆ. ಈಗ ಅವರ ಪುತ್ರ ಸೌರಭ್‌ ಚೋಪ್ರಾ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಸೌರಬ್‌ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಸವದತ್ತಿಯಲ್ಲಿ ಬೆಂಬಲಿಗರ ಸಭೆಯನ್ನು ನಡೆಸಿದ ವೇಳೆ ತಾಯಿ ಕಾಂತಾದೇವಿ ಕಣ್ಣೀರು ಹಾಕಿದರು. ಗಂಡನನ್ನು ಕಳೆದುಕೊಂಡ ನಾನು ನಿಮಗೆ ಮಗನನ್ನು ಬಿಟ್ಟಿದ್ದೇನೆ. ನೀವೇನು ಮಾಡ್ತೀರಿ ಮಾಡಿ, ನಿಮಗೆ ಬಿಟ್ಟಿದ್ದು ಎಂದು ಮಂಡಿಯೂರಿ ಅಳಲು ತೋಡಿಕೊಂಡಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more