News Hour: ಸೋನಿಯಾ ಗಾಂಧಿಗೆ ಬೈದ ನೀವೇ ಇಂದು ಅವರ ಕಾಲ ಕೆಳಗೆ ಕುಳಿತಿಲ್ವಾ, ಸಿದ್ದುಗೆ ಜಿಟಿಡಿ ಟಾಂಗ್‌!

News Hour: ಸೋನಿಯಾ ಗಾಂಧಿಗೆ ಬೈದ ನೀವೇ ಇಂದು ಅವರ ಕಾಲ ಕೆಳಗೆ ಕುಳಿತಿಲ್ವಾ, ಸಿದ್ದುಗೆ ಜಿಟಿಡಿ ಟಾಂಗ್‌!

Published : Sep 01, 2023, 11:43 PM IST


2018ರ ಚಾಮುಂಡೇಶ್ವರಿ ಚುನಾವಣೆಯ ಸೋಲನ್ನು ನೆನಪಿಸಿಕೊಂಡು, ಕೆಲಸಕ್ಕೆ ಬಾರದವರನ್ನು ಆಯ್ಕೆ ಮಾಡಿದ್ದೀರಿ ಎಂದಿದ್ದ ಸಿಎಂ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹರಿಹಾಯ್ದಿದ್ದಾರೆ.

ಬೆಂಗಳೂರು (ಸೆ.1): ಕೆಲಸಕ್ಕೆ ಬಾರದವರನ್ನು ಚಾಮುಂಡೇಶ್ವರಿಯಲ್ಲಿ ಆಯ್ಕೆ ಮಾಡಿದ್ದೀರಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರ ಮಾತಿಗೆ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನ ಸೀಮೆ ಎಣ್ಣೆ ಪಾರ್ಟಿ ಎಂದಿದ್ದ ನೀವು ಈಗ ಯಾರ ಕೆಳಗಿದ್ದೀರಿ ಅನ್ನೋದನ್ನ ನೆನಪು ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ನಾನು ಐದು ಬಾರಿ ಗೆದ್ದಿದ್ದೇನೆ. ನೀವು ರಾಜಶೇಖರ ಮೂರ್ತಿ ಮತ್ತೆ ನನ್ನ ವಿರುದ್ಧ ಸೋತಿದ್ದೀರಿ. 2013ರಲ್ಲಿ ನನ್ನನ್ನು ಸೋಲಿಸಲು ಬಂದಿದ್ದೀರಿ. ಆಗ ನಿಮಗೆ ಸಾಧ್ಯವಾಯ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಈ ಹಿಂದೆ ನೀವೇ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಗೆ ಬೈದಿಲ್ವಾ?  ಆಕೆಗೆ ಭಾರತೀಯ ಪೌರತ್ವ ನೀಡಲೇಬಾರದು ಎಂದಿದ್ದೀರಿ. ಈಗ ನೀವು ಯಾರ ಕಾಲ ಕೆಳಗೆ ಇದ್ದೀರಿ ಅನ್ನೋದನ್ನು ನೋಡಿಕೊಳ್ಳಿ ಎಂದು ಟಾಂಗ್‌ ನೀಡಿದ್ದಾರೆ.

ನನ್ನನ್ನು ಬಿಟ್ಟು ಕೆಲಸಕ್ಕೆ ಬಾರದವರನ್ನ ಚಾಮುಂಡೇಶ್ವರಿಯಲ್ಲಿ ಗೆಲ್ಲಿಸಿದವರು ನೀವು: ಸಿಎಂ ಸಿದ್ಧರಾಮಯ್ಯ

1983ರಲ್ಲಿ ನಿಮ್ಮನ್ನು ಗೆಲ್ಲಿಸಿದ ಸಮುದಾಯ ಯಾವುದು ಅನ್ನೋದನ್ನು ನೆನಪು ಮಾಡಿಕೊಳ್ಳಿ. ಆದರೆ, ಅಂದು ನೀವು ಗೆಲ್ಲಿಸಿದವರ ಹೆಸರನ್ನೂ ಹೇಳಲಿಲ್ಲ. ನೆನಪೂ ಮಾಡಿಕೊಳ್ಳಲಿಲ್ಲ.ಈಗ ಸಿಎಂ ಆಗಿದ್ದೀರಿ. ಯಾರಿಗೂ ಅಗೌರವ ತೋರಬೇಡಿ. ನಾನು ನಾಯಕನೇ ಸುಮ್ಮನೆ ಏಕವಚನದಲ್ಲಿ ಮಾತನಾಡುವ ಅಭ್ಯಾಸ ಮಾಡಿಕೊಳ್ಳಬೇಡಿ ಎಂದು ಟೀಕಿಸಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more