News Hour: ಸೋನಿಯಾ ಗಾಂಧಿಗೆ ಬೈದ ನೀವೇ ಇಂದು ಅವರ ಕಾಲ ಕೆಳಗೆ ಕುಳಿತಿಲ್ವಾ, ಸಿದ್ದುಗೆ ಜಿಟಿಡಿ ಟಾಂಗ್‌!

News Hour: ಸೋನಿಯಾ ಗಾಂಧಿಗೆ ಬೈದ ನೀವೇ ಇಂದು ಅವರ ಕಾಲ ಕೆಳಗೆ ಕುಳಿತಿಲ್ವಾ, ಸಿದ್ದುಗೆ ಜಿಟಿಡಿ ಟಾಂಗ್‌!

Published : Sep 01, 2023, 11:43 PM IST


2018ರ ಚಾಮುಂಡೇಶ್ವರಿ ಚುನಾವಣೆಯ ಸೋಲನ್ನು ನೆನಪಿಸಿಕೊಂಡು, ಕೆಲಸಕ್ಕೆ ಬಾರದವರನ್ನು ಆಯ್ಕೆ ಮಾಡಿದ್ದೀರಿ ಎಂದಿದ್ದ ಸಿಎಂ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹರಿಹಾಯ್ದಿದ್ದಾರೆ.

ಬೆಂಗಳೂರು (ಸೆ.1): ಕೆಲಸಕ್ಕೆ ಬಾರದವರನ್ನು ಚಾಮುಂಡೇಶ್ವರಿಯಲ್ಲಿ ಆಯ್ಕೆ ಮಾಡಿದ್ದೀರಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರ ಮಾತಿಗೆ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನ ಸೀಮೆ ಎಣ್ಣೆ ಪಾರ್ಟಿ ಎಂದಿದ್ದ ನೀವು ಈಗ ಯಾರ ಕೆಳಗಿದ್ದೀರಿ ಅನ್ನೋದನ್ನ ನೆನಪು ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ನಾನು ಐದು ಬಾರಿ ಗೆದ್ದಿದ್ದೇನೆ. ನೀವು ರಾಜಶೇಖರ ಮೂರ್ತಿ ಮತ್ತೆ ನನ್ನ ವಿರುದ್ಧ ಸೋತಿದ್ದೀರಿ. 2013ರಲ್ಲಿ ನನ್ನನ್ನು ಸೋಲಿಸಲು ಬಂದಿದ್ದೀರಿ. ಆಗ ನಿಮಗೆ ಸಾಧ್ಯವಾಯ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಈ ಹಿಂದೆ ನೀವೇ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಗೆ ಬೈದಿಲ್ವಾ?  ಆಕೆಗೆ ಭಾರತೀಯ ಪೌರತ್ವ ನೀಡಲೇಬಾರದು ಎಂದಿದ್ದೀರಿ. ಈಗ ನೀವು ಯಾರ ಕಾಲ ಕೆಳಗೆ ಇದ್ದೀರಿ ಅನ್ನೋದನ್ನು ನೋಡಿಕೊಳ್ಳಿ ಎಂದು ಟಾಂಗ್‌ ನೀಡಿದ್ದಾರೆ.

ನನ್ನನ್ನು ಬಿಟ್ಟು ಕೆಲಸಕ್ಕೆ ಬಾರದವರನ್ನ ಚಾಮುಂಡೇಶ್ವರಿಯಲ್ಲಿ ಗೆಲ್ಲಿಸಿದವರು ನೀವು: ಸಿಎಂ ಸಿದ್ಧರಾಮಯ್ಯ

1983ರಲ್ಲಿ ನಿಮ್ಮನ್ನು ಗೆಲ್ಲಿಸಿದ ಸಮುದಾಯ ಯಾವುದು ಅನ್ನೋದನ್ನು ನೆನಪು ಮಾಡಿಕೊಳ್ಳಿ. ಆದರೆ, ಅಂದು ನೀವು ಗೆಲ್ಲಿಸಿದವರ ಹೆಸರನ್ನೂ ಹೇಳಲಿಲ್ಲ. ನೆನಪೂ ಮಾಡಿಕೊಳ್ಳಲಿಲ್ಲ.ಈಗ ಸಿಎಂ ಆಗಿದ್ದೀರಿ. ಯಾರಿಗೂ ಅಗೌರವ ತೋರಬೇಡಿ. ನಾನು ನಾಯಕನೇ ಸುಮ್ಮನೆ ಏಕವಚನದಲ್ಲಿ ಮಾತನಾಡುವ ಅಭ್ಯಾಸ ಮಾಡಿಕೊಳ್ಳಬೇಡಿ ಎಂದು ಟೀಕಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more