BJP Janasankalpa Yatre: ಜೀವರಾಜ್, ಪರವಾಗಿಲ್ವಪ್ಪಾ.. 2023ಕ್ಕೆ ದಾಟುತ್ತೀಯ: ಸಿಎಂ ಬೊಮ್ಮಾಯಿ ಮೆಚ್ಚುಗೆ

BJP Janasankalpa Yatre: ಜೀವರಾಜ್, ಪರವಾಗಿಲ್ವಪ್ಪಾ.. 2023ಕ್ಕೆ ದಾಟುತ್ತೀಯ: ಸಿಎಂ ಬೊಮ್ಮಾಯಿ ಮೆಚ್ಚುಗೆ

Published : Nov 27, 2022, 03:56 PM ISTUpdated : Nov 27, 2022, 04:08 PM IST

ಕೊಪ್ಪದಲ್ಲಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಯಲ್ಲಿಯೂ ಹೆಚ್ಚಿನ ಜನರು ಸೇರಿರುವುದನ್ನು ಕಂಡ  ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಜೀವರಾಜ್‌, ಪರ್ವಾಗಿಲ್ಲಪ್ಪಾ.. 2023 ದಾಟುತ್ತೀಯಾ.. ಬ್ಯಾಟರಿ ಫುಲ್‌ ಚಾರ್ಜ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿಕ್ಕಮಗಳೂರು (ನ.27) : ರಾಜ್ಯಾದ್ಯಂತ ಜನಸಂಕಲ್ಪ ಕಾರ್ಯಕ್ರಮವನ್ನು ಮಾಡುತ್ತಿದ್ದು, ಕಲಬುರಗಿಯಿಂದ ಆರಂಭವಾಗಿ ಮುಂಬೈ ಕರ್ನಾಟಕ, ಮಧ್ಯ ಕರ್ನಾಟಕ ಪೂರ್ಣಗೊಂಡು ಈಗ ಮಲೆನಾಡಿನತ್ತ ಬಂದಿದ್ದೇವೆ. ನಾವು ಬದುಕಿಗಾಗಿ ಹತ್ತು ಹಲವು ಅಭಿವೃದ್ಧಿ ಕೆಲಸಗಳನ್ನು ನಾವು ಮಾಡುತ್ತಾ ಬಂದಿದ್ದೇವೆ. ಜೀವರಾಜ್‌, ಪರ್ವಾಗಿಲ್ಲಪ್ಪಾ.. 2023 ದಾಟುತ್ತೀಯಾ.. ಬ್ಯಾಟರಿ ಫುಲ್‌ ಚಾರ್ಜ ಇದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾರದಾಂಬೆ ನೆಲೆಗೊಂಡಿರುವ ಪುಣ್ಯ ಭೂಮಿ ಇದಕ್ಕಿಂತ ಏನೂ ಬೇಕು. ಶೃಂಗೇರಿಯ ಹೆಸ್ರನ್ನು ಜಗತ್ತಿಗೆ ಪ್ರಸಿದ್ದಿ ಮಾಡಲು ಸಂಕಲ್ಪ ತೊಟ್ಟು ಸಂಕಲ್ಪ ಯಾತ್ರೆಗೆ ಬಂದಿದ್ದೇವೆ. ಕಳೆದ 70 ವರ್ಷ ನೀರು ಕೊಡದವರು ನಮ್ಮ ಆಳಿದ್ದರು, ಅವರು ಬದುಕು ಕಟ್ಟಿಕೊಡುತ್ತಾರಾ? ಎಲ್ಲಾ ಸಮಯದಲ್ಲೂ ಮೋಸ ಮಾಡಲು ಆಗಲ್ಲ, ಜನರು ಬದಲಾಗಿದ್ದಾರೆ. ಅಭಿವೃದ್ಧಿ ಪಥದಲ್ಲಿರುವ ಬಿಜೆಪಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more