ರಾಮನಗರದಿಂದ ಬೇರ್ಪಡುತ್ತಾ ಕನಕಪುರ..? ಮಾಜಿ ಸಿಎಂನ ಮಾಜಿ ಭದ್ರಕೋಟೆ ಮೇಲೆ ಇಬ್ಭಾಗಾಸ್ತ್ರ..?

ರಾಮನಗರದಿಂದ ಬೇರ್ಪಡುತ್ತಾ ಕನಕಪುರ..? ಮಾಜಿ ಸಿಎಂನ ಮಾಜಿ ಭದ್ರಕೋಟೆ ಮೇಲೆ ಇಬ್ಭಾಗಾಸ್ತ್ರ..?

Published : Oct 26, 2023, 02:02 PM IST

ರಾಮನಗರದಿಂದ ಬೇರ್ಪಡುತ್ತಾ ಕನಕಪುರ..?
ಡಿಕೆ ಮಾತಿಗೆ ಕೆಂಡವಾದ ಕುಮಾರಸ್ವಾಮಿ..!
ಏನಿದು ಒಕ್ಕಲಿಗ ನಾಯಕರ ಜಟಾಪಟಿ..?

ರಾಮನಗರ ಈಗ ಕರ್ನಾಟಕ ರಾಜಕೀಯದ ಕೇಂದ್ರ ಬಿಂದುವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿಯವರ(Former CM HD Kumaraswamy) ಮಾಜಿ ಭದ್ರಕೋಟೆಯ ಮೇಲೆ ಈಗ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಅವರ ಕಣ್ಣು ಬಿದ್ದಿದೆ. ರಾಮನಗರ(Ramanagar) ಜಿಲ್ಲೆಯಿಂದ ತಮ್ಮ ಸಾಮ್ರಾಜ್ಯವಾದ ಕನಕಪುರವನ್ನ(Kanakapura) ಬೇರ್ಪಡಿಸಿ ಬೆಂಗಳೂರಿಗೆ ಸೇರಿಸೋಕೆ ಡಿಕೆ ಶಿವಕುಮಾರ್ ಲೆಕ್ಕಾಚಾರ ಹಾಕ್ತಾ ಇದ್ದಾರೆ. ಇದೊಂದು ಮಾತು ಉಪ ಮುಖ್ಯಮಂತ್ರಿ ಬಾಯಿಂದ ಬಂದಿದ್ದೇ ತಡ, ರಾಜಕೀಯವಾಗಿ ದೊಡ್ಡ ಅಲೆಯೇ ಎದ್ದಿದೆ. ರಾಮನಗರದಲ್ಲಿ ಇಷ್ಟು ವರ್ಷ ಬಿಗಿಯಾದ ಹಿಡಿತ ಹೊಂದಿದ್ದ ಕುಮಾರಸ್ವಾಮಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನ, ತಮ್ಮ ಮಗನನ್ನ ಗೆಲ್ಲಿಸೋಕೆ ಸೋತಿದ್ದರು. ಜೆಡಿಎಸ್ ಭದ್ರಕೋಟೆಯಾಗಿದ್ದ ರಾಮನಗರ ಕಾಂಗ್ರೆಸ್ ಕೈವಶವಾಯ್ತು. ಈಗ ಅದು ಡಿಕೆ ಶಿವಕುಮಾರ್ ಕಂಟ್ರೋಲಿನಲ್ಲಿದೆ ಅಂದ್ರೂ ತಪ್ಪಾಗೋದಿಲ್ಲಾ. ಹೀಗಾಗಿ ಹೊಸದೊಂದು ರಾಜಕೀಯ ದಾಳವನ್ನ ಉರುಳಿಸೋಕೆ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಅದೇ ರಾಮನಗರ ಜಿಲ್ಲೆಯಿಂದ ತಮ್ಮ ಕ್ಷೇತ್ರವಾದ ಕನಕಪುರವನ್ನ ಬೇರ್ಪಡಿಸಿ ತಮ್ಮ ಕಾರ್ಯಕ್ಷೇತ್ರ ಬೆಂಗಳುರಿಗೆ ಸೇರಿಸೋದು. ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಅವರ ರಾಜಕೀಯ ಸಂಬಂಧ ಅರ್ಥವೇ ಆಗೋದಿಲ್ಲ. ಕೆಲವೊಮ್ಮೆ ದೋಸ್ತಿ.. ಉಳಿದಾಗಲೆಲ್ಲಾ ಕುಸ್ತಿ ಅನ್ನೋ ಥರ ವಿಲಕ್ಷಣ ವ್ಯಕ್ತಿತ್ವವನ್ನ ಅವರು ತೋರಿಸ್ತಾರೆ. ಕುಮಾರಸ್ವಾಮಿ ಅವರ ಸರ್ಕಾರವನ್ನ ಉಳಿಸಿಕೊಳ್ಳೋಕೆ ಯಾರಾದ್ರೂ ಶಕ್ತಿ ಮೀರಿ ಹೋರಾಡಿದ್ರೆ ಅದು ಡಿಕೆ ಶಿವಕುಮಾರ್. ಇನ್ನು ನಾವಿಬ್ಬರೂ ಜೋಡೆತ್ತುಗಳು ಅಂತ ಕೈ ಹಿಡಿದು ಎದೆಯುಬ್ಬಿಸಿ ಹೇಳಿದ್ರೆ ಅದು ಕುಮಾರಸ್ವಾಮಿ ಮಾತ್ರ.. ಇಂಥ ದೋಸ್ತಿಗಳ ಮಧ್ಯ ದಂಗಲ್ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ಒಕ್ಕಲಿಗ ನಾಯಕರ ನಡುವೆ ಕನಕಪುರ ವಾರ್‌: ಇದ್ದಕ್ಕಿದ್ದಂತೆ ಒಂದೇ ದಿನದಲ್ಲಿ ಡಿಕೆಶಿ ಉಲ್ಟಾ ಹೊಡೆದಿದ್ದೇಕೆ..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more