ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

Jan 18, 2023, 10:41 AM IST

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಳಪತಿಗಳಿಗೆ ಪಕ್ಷದ ಭಿನ್ನಮತೀಯರು ತಲೆನೋವಾಗಿ ಪರಿಣಮಿಸಿದ್ದಾರೆ. ಕೆ.ಆರ್‌ ಪೇಟೆ ಹಾಗೂ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಪಕ್ಷಕ್ಕೆ ಬಂಡಾಯದ ಬಿಸಿ ಎದುರಾಗಿದೆ. ಕಳೆದ ಬಾರಿ ಮಂಡ್ಯದ ಎಲ್ಲಾ 7 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಪಕ್ಷದಲ್ಲಿ ಈ ಬಾರಿ ಟಿಕೆಟ್‌ ಘೋಷಣೆ ಬೆನ್ನಲ್ಲೇ ಅಸಮಾಧಾನ ಎದುರಾಗಿದೆ. ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ವೆಂಕಟೇಶ್‌ ತೊಡೆ ತಟ್ಟಿದ್ದು,   ಹೆಚ್.ಟಿ ಮಂಜುಗೆ ಟಿಕೆಟ್‌ ಕೊಟ್ಟಿದ್ದಕ್ಕೆ ರೇವಣ್ಣ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ ಹೆಚ್ಚಾಗಿದೆ.