Jan 25, 2023, 12:05 PM IST
2023ರ ಚುನಾವಣೆಯಲ್ಲಿ ಬಹುಮತ ನೀಡಿದ್ರೆ ಯಾವುದೇ ಪಕ್ಷದ ಜೊತೆ ಹೋಗಲ್ಲ. ಈ ಕಳ್ಳಕಾಕರ ಜೊತೆಗೆ ನಾನು ಹೋಗಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ನಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಕಡೆ ಅನುಭವಿಸಿ ಬಿಟ್ಟಿದ್ದೇನೆ. ನನಗೆ ಅದರ ಅವಶ್ಯಕತೆ ಇಲ್ಲ, ಬಹುಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.