ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದ್ದು, ಕೇಸರಿ ಪಾಳೆಯ ಅಖಾಡಕ್ಕೆ ಸಜ್ಜಾಗಿದ್ದಾರೆ. ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮೂರು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದು, ನಾಳೆ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಿಜೆಪಿ ನಾಯಕರ ಜತೆ ಹೈ ವೋಲ್ಟೇಜ್ ಮೀಟಿಂಗ್ ನಡೆಸಿ, ಮಂಡ್ಯ ಮೆಗಾ ಡೈರಿಯನ್ನು ಸಹ ಅಮಿತ್ ಶಾ ಉದ್ಘಾಟಿಸಲಿದ್ದಾರೆ. ನಂತರ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಬೆಂಗಳೂರು ಅರಮನೆ ಮೈದಾನದಲ್ಲಿ ಸಹಕಾರಿ ಸಪ್ತಾಹ ನಡೆಯಲಿದೆ. ಡಿ 30ರಂದು ರಾತ್ರಿ ಬಿಜೆಪಿ ಪ್ರಮುಖರೊಂದಿಗೆ ಚರ್ಚೆ ನಡೆಸಿ, ಡಿ. 31ರಂದು ಬೆಳಗ್ಗೆ ನಾಯಕರೊಂದಿಗೆ ಬ್ರೆಕ್ಫಾಸ್ಟ್ ಸಭೆ ಮಾಡಲಿದ್ದಾರೆ.
Assembly Election 2023: ಮಂಡ್ಯ ಗೆಲುವಿಗೆ 'ಪಂಚರತ್ನ' ಮಂತ್ರ: 2023ರಲ್ಲಿ ಜೆಡಿಎಸ್ ಭದ್ರಕೋಟೆ ಏನಾಗಲಿದೆ?