ಕಾಂಗ್ರೆಸ್‌ಗೆ  ತಿರುಗುಬಾಣವಾಯ್ತಾ ಪಂಚಮಸಾಲಿ ಅಸ್ತ್ರ.. ಮೀಸಲಾತಿ ಮಹಾಸಮರದಲ್ಲಿ ಸಿಎಂ ಮಾಸ್ಟರ್ ಸ್ಟ್ರೋಕ್..!

ಕಾಂಗ್ರೆಸ್‌ಗೆ ತಿರುಗುಬಾಣವಾಯ್ತಾ ಪಂಚಮಸಾಲಿ ಅಸ್ತ್ರ.. ಮೀಸಲಾತಿ ಮಹಾಸಮರದಲ್ಲಿ ಸಿಎಂ ಮಾಸ್ಟರ್ ಸ್ಟ್ರೋಕ್..!

Published : Apr 04, 2023, 11:23 AM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಈ ಮಧ್ಯೆ ಪಂಚಮಸಾಲಿ ಅಸ್ತ್ರದ ಮೂಲಕ ಬಿಜೆಪಿ  ಕಟ್ಟಿಹಾಕುವ ಕಾಂಗ್ರೆಸ್ ತಂತ್ರ ಅವರಿಗೆ ಮುಳುವಾದಂತಾಗಿದೆ.  

ಬಿಜೆಪಿ ಸರ್ಕಾರ ಪಂಚಮಸಾಲಿ ಮೀಸಲಾತಿ ಅಸ್ತ್ರಕ್ಕೆ ಅಖಂಡ ಲಿಂಗಾಯತ ಪ್ರತ್ಯಾಸ್ತ್ರವಾಗಿ 2D ಪ್ರವರ್ಗದಡಿ ಮೀಸಲಾತಿ ನೀಡಿದ್ದು, ಸದ್ಯ ಸಿಎಂ ಬೊಮ್ಮಾಯಿ ಬೆನ್ನಿಗೆ ಇಬ್ಬರು ಪಂಚಮಸಾಲಿ ಸ್ವಾಮೀಜಿಗಳು ನಿಂತಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿಗೆ ವಚನಾನಂದ ಶ್ರೀ ಮತ್ತು ಜಯಮೃತ್ಯುಂಜಯ ಶ್ರೀ ಬೆಂಬಲ ಸೂಚಿಸಿದ್ದಾರೆ. ಇನ್ನು  ಸಿಎಂಗೆ ಸ್ವಾಮೀಜಿಗಳ ಬೆಂಬಲ ಸಿಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ತಳಮಳ ಶುರುವಾಗಿದ್ದು, ಪಂಚಮಸಾಲಿ ಅಸ್ತ್ರದ ಮೂಲಕ ಬಿಜೆಪಿ  ಕಟ್ಟಿಹಾಕುವ ಕಾಂಗ್ರೆಸ್ ತಂತ್ರ ಅವರಿಗೆ ಮುಳುವಾದಂತಾಗಿದೆ.  ಹಾಗೇ ಮೀಸಲಾತಿ ಗಿಫ್ಟ್ ಬಳಿಕ ರಾಜಕೀಯ ಲೆಕ್ಕಾಚಾರ ತಲೆಕೆಳಗಾಗಿದ್ದು,  ಶಿಗ್ಗಾಂವಿಯಲ್ಲಿ ಸ್ಪರ್ಧಿಸದಂತೆ ವಿನಯ್‌ಗೆ ಕಾಂಗ್ರೆಸ್ ಮುಖಂಡರು ಸಲಹೆ ನೀಡಿದ್ದರು. ಆದರೆ ವಿನಯ್ ಕುಲಕರ್ಣಿಗೆ ಮೂಲ ಕ್ಷೇತ್ರ ಬಿಟ್ಟು ತೆರಳದಂತೆ ಧಾರವಾಡ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಮತ್ತೊಂದೆಡೆ ಪಂಚಮಸಾಲಿ ಸಮುದಾಯ ಬೆಂಬಲ ಸಿಗುತ್ತಾ ಅನ್ನುವ ಅನುಮಾನವು ಶುರುವಾಗಿದೆ.


 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more