ಕಾಂಗ್ರೆಸ್‌ಗೆ  ತಿರುಗುಬಾಣವಾಯ್ತಾ ಪಂಚಮಸಾಲಿ ಅಸ್ತ್ರ.. ಮೀಸಲಾತಿ ಮಹಾಸಮರದಲ್ಲಿ ಸಿಎಂ ಮಾಸ್ಟರ್ ಸ್ಟ್ರೋಕ್..!

ಕಾಂಗ್ರೆಸ್‌ಗೆ ತಿರುಗುಬಾಣವಾಯ್ತಾ ಪಂಚಮಸಾಲಿ ಅಸ್ತ್ರ.. ಮೀಸಲಾತಿ ಮಹಾಸಮರದಲ್ಲಿ ಸಿಎಂ ಮಾಸ್ಟರ್ ಸ್ಟ್ರೋಕ್..!

Published : Apr 04, 2023, 11:23 AM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಈ ಮಧ್ಯೆ ಪಂಚಮಸಾಲಿ ಅಸ್ತ್ರದ ಮೂಲಕ ಬಿಜೆಪಿ  ಕಟ್ಟಿಹಾಕುವ ಕಾಂಗ್ರೆಸ್ ತಂತ್ರ ಅವರಿಗೆ ಮುಳುವಾದಂತಾಗಿದೆ.  

ಬಿಜೆಪಿ ಸರ್ಕಾರ ಪಂಚಮಸಾಲಿ ಮೀಸಲಾತಿ ಅಸ್ತ್ರಕ್ಕೆ ಅಖಂಡ ಲಿಂಗಾಯತ ಪ್ರತ್ಯಾಸ್ತ್ರವಾಗಿ 2D ಪ್ರವರ್ಗದಡಿ ಮೀಸಲಾತಿ ನೀಡಿದ್ದು, ಸದ್ಯ ಸಿಎಂ ಬೊಮ್ಮಾಯಿ ಬೆನ್ನಿಗೆ ಇಬ್ಬರು ಪಂಚಮಸಾಲಿ ಸ್ವಾಮೀಜಿಗಳು ನಿಂತಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿಗೆ ವಚನಾನಂದ ಶ್ರೀ ಮತ್ತು ಜಯಮೃತ್ಯುಂಜಯ ಶ್ರೀ ಬೆಂಬಲ ಸೂಚಿಸಿದ್ದಾರೆ. ಇನ್ನು  ಸಿಎಂಗೆ ಸ್ವಾಮೀಜಿಗಳ ಬೆಂಬಲ ಸಿಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ತಳಮಳ ಶುರುವಾಗಿದ್ದು, ಪಂಚಮಸಾಲಿ ಅಸ್ತ್ರದ ಮೂಲಕ ಬಿಜೆಪಿ  ಕಟ್ಟಿಹಾಕುವ ಕಾಂಗ್ರೆಸ್ ತಂತ್ರ ಅವರಿಗೆ ಮುಳುವಾದಂತಾಗಿದೆ.  ಹಾಗೇ ಮೀಸಲಾತಿ ಗಿಫ್ಟ್ ಬಳಿಕ ರಾಜಕೀಯ ಲೆಕ್ಕಾಚಾರ ತಲೆಕೆಳಗಾಗಿದ್ದು,  ಶಿಗ್ಗಾಂವಿಯಲ್ಲಿ ಸ್ಪರ್ಧಿಸದಂತೆ ವಿನಯ್‌ಗೆ ಕಾಂಗ್ರೆಸ್ ಮುಖಂಡರು ಸಲಹೆ ನೀಡಿದ್ದರು. ಆದರೆ ವಿನಯ್ ಕುಲಕರ್ಣಿಗೆ ಮೂಲ ಕ್ಷೇತ್ರ ಬಿಟ್ಟು ತೆರಳದಂತೆ ಧಾರವಾಡ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಮತ್ತೊಂದೆಡೆ ಪಂಚಮಸಾಲಿ ಸಮುದಾಯ ಬೆಂಬಲ ಸಿಗುತ್ತಾ ಅನ್ನುವ ಅನುಮಾನವು ಶುರುವಾಗಿದೆ.


 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more